ರಾಜ್ಯ

ಅಂಬೇಡ್ಕರ್‌ರವರ ವಿಚಾರದಲ್ಲಿ ಕಾಂಗ್ರೆಸ್‌ ತಪ್ಪಾಗಿ ನಡೆದುಕೊಂಡಡಿದೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ವಿಚಾರದಲಲಿ ಕಾಂಗ್ರೆಸ್ ತಪ್ಪಾಗಿ ನಡೆದುಕೊಂಡಿತೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ಹೊಸ ವರ್ಷದ ಶುಭಾರಂಭ, ಈ ಹೊಸ ವರ್ಷದಲ್ಲಿ ನಾವು ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ನಡೆಸುತ್ತಿದ್ದೇವೆ. 2024ರ ಡಿಸೆಂಬರ್.27 ರಂದು ನಡೆಯಬೇಕಾಗಿದ್ದ ಈ ಸಮಾವೇಶ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿತ್ತು. ಮನಮೋಹನ್ ಸಿಂಗ್ ಅವರು ಕೊಟ್ಟ ಕೊಡುಗೆಗಳನ್ನು ಇಡೀ ದೇಶ ಕೊಂಡಾಡಿದೆ ಎಂದರು.

ಸಂಸತ್ತಿನ ಎದುರಿಗೆ ಅಂಬೇಡ್ಕರ್ ಪ್ರತಿಮೆ ನಿಲ್ಲಿಸಿದ್ದು ಬಿಜೆಪಿಯವರಾ? ಆದರೆ ಈಗ ಮೋದಿಯವರು ಎದುರಿಗೆ ಇದ್ದ ಪ್ರತಿಮೆಯನ್ನು ಮೂಲೆಗೆ ತೆಗೆದುಕೊಂಡು ಹೋಗಿ ಇಟ್ಟಿದ್ದಾರೆ. ಇಂತಹರು ಈಗ ಅಂಬೇಡ್ಕರ್ ವಿಚಾರದಲ್ಲಿ ನಾಟಕ ಮಾಡುತ್ತಿದ್ದಾರೆ. ಸಂವಿಧಾನ ಸುಟ್ಟವರು, ಬಾಬಾ ಸಾಹೇಬರ ಪುತ್ಥಳಿ ಸುಟ್ಟವರು, ಪಂಡಿತ್ ಜವಾಹರ ಲಾಲ್ ನೆಹರು ಅವರ ಪುತ್ಥಳಿ ಸುಟ್ಟವರು ಯಾರಾದರೂ ಇದ್ದರೆ, ಅದು ಬಿಜೆಪಿಯವರು, ಆರ್.ಎಸ್.ಎಸ್‌ನವರು ಹಾಗೂ ಹಿಂದೂ ಮಹಾಸಭಾದವರಾಗಿದ್ದಾರೆ. ಈ ವಿಚಾರಗಳೆಲ್ಲವೂ ಇತಿಹಾಸದಲ್ಲಿವೆ. ಹೀಗಾಗಿ ನಾನು ಇದನ್ನು ಎಲ್ಲಿ ಬೇಕಾದರೂ ನಿರೂಪಿಸುತ್ತೇನೆ. ಅಂಬೇಡ್ಕರ್ ಅವರ ವಿಚಾರದಲ್ಲಿ ನಮ್ಮ ನಮ್ಮ ನಡುವೆಯೇ ಜಗಳ ಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು. ರಾಜ್ಯಸಭಾ ಸದಸ್ಯರಾಗಿದ್ದ ಎಂ.ಆರ್. ಜೈಕರ್ ಅವರ ರಾಜೀನಾಮೆ ಕೊಡಿಸಿ, ಆ ಜಾಗದಲ್ಲಿ ಅಂಬೇಡ್ಕರ್ ಅವರನ್ನು ಆರಿಸಿ ತಂದಿದ್ದು ಕಾಂಗ್ರೆಸ್. ಹೀಗಿರುವಾಗ ಪಂಡಿತ್ ಜವಾಹರ್ ಲಾಲ್ ನೆಹರು ಅವರು, ಮಹಾತ್ಮ ಗಾಂಧೀಜಿಯವರು ಹಾಗೂ ನಮ್ಮ ಪಕ್ಷದ ಮೇಲೆ ಆಪಾದನೆ ಮಾಡುತ್ತೀರಿ, ನೀವು ಏನು ಮಾಡಿದಿರಿ ಅವರಿಗೆ? ಎಂದು ಪ್ರಶ್ನಿಸಿದ್ದಾರೆ.

ನೀವು ಹೇಳುತ್ತೀರಿ, “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನ ಮನುಸ್ಮೃತಿ ಪ್ರಕಾರ ಇಲ್ಲ, ಅದಕ್ಕಾಗಿ ಈ ಸಂವಿಧಾನವನ್ನ ನಾವು ಒಪ್ಪುವುದಿಲ್ಲ, ತ್ರಿವರ್ಣ ಧ್ವಜವನ್ನ ಒಪ್ಪಲ್ಲ, ಅಶೋಕ ಚಕ್ರ ಒಪ್ಪಲ್ಲ,” ಎಂದು. ಹೀಗೆ ಹೇಳಿದವರು ಈಗ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಿದ್ದೀರಿ, ನಾಚಿಕೆಯಾಗಬೇಕು ನಿಮಗೆ. ನಿಮ್ಮ 50 ವರ್ಷಗಳ ಇತಿಹಾಸದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ತಮ್ಮ ಕಚೇರಿ ಮೇಲೆ ಎಂದೂ ತ್ರಿವರ್ಣ ಧ್ವಜ ಹಾರಿಸಿಲ್ಲ ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

20 mins ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

44 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

1 hour ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

1 hour ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

1 hour ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago