ರಾಜ್ಯ

ಅಂಬೇಡ್ಕರ್‌ರವರ ವಿಚಾರದಲ್ಲಿ ಕಾಂಗ್ರೆಸ್‌ ತಪ್ಪಾಗಿ ನಡೆದುಕೊಂಡಡಿದೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ: ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ವಿಚಾರದಲಲಿ ಕಾಂಗ್ರೆಸ್ ತಪ್ಪಾಗಿ ನಡೆದುಕೊಂಡಿತೆಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್‌ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ಹೊಸ ವರ್ಷದ ಶುಭಾರಂಭ, ಈ ಹೊಸ ವರ್ಷದಲ್ಲಿ ನಾವು ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ನಡೆಸುತ್ತಿದ್ದೇವೆ. 2024ರ ಡಿಸೆಂಬರ್.27 ರಂದು ನಡೆಯಬೇಕಾಗಿದ್ದ ಈ ಸಮಾವೇಶ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ ಮುಂದೂಡಲಾಗಿತ್ತು. ಮನಮೋಹನ್ ಸಿಂಗ್ ಅವರು ಕೊಟ್ಟ ಕೊಡುಗೆಗಳನ್ನು ಇಡೀ ದೇಶ ಕೊಂಡಾಡಿದೆ ಎಂದರು.

ಸಂಸತ್ತಿನ ಎದುರಿಗೆ ಅಂಬೇಡ್ಕರ್ ಪ್ರತಿಮೆ ನಿಲ್ಲಿಸಿದ್ದು ಬಿಜೆಪಿಯವರಾ? ಆದರೆ ಈಗ ಮೋದಿಯವರು ಎದುರಿಗೆ ಇದ್ದ ಪ್ರತಿಮೆಯನ್ನು ಮೂಲೆಗೆ ತೆಗೆದುಕೊಂಡು ಹೋಗಿ ಇಟ್ಟಿದ್ದಾರೆ. ಇಂತಹರು ಈಗ ಅಂಬೇಡ್ಕರ್ ವಿಚಾರದಲ್ಲಿ ನಾಟಕ ಮಾಡುತ್ತಿದ್ದಾರೆ. ಸಂವಿಧಾನ ಸುಟ್ಟವರು, ಬಾಬಾ ಸಾಹೇಬರ ಪುತ್ಥಳಿ ಸುಟ್ಟವರು, ಪಂಡಿತ್ ಜವಾಹರ ಲಾಲ್ ನೆಹರು ಅವರ ಪುತ್ಥಳಿ ಸುಟ್ಟವರು ಯಾರಾದರೂ ಇದ್ದರೆ, ಅದು ಬಿಜೆಪಿಯವರು, ಆರ್.ಎಸ್.ಎಸ್‌ನವರು ಹಾಗೂ ಹಿಂದೂ ಮಹಾಸಭಾದವರಾಗಿದ್ದಾರೆ. ಈ ವಿಚಾರಗಳೆಲ್ಲವೂ ಇತಿಹಾಸದಲ್ಲಿವೆ. ಹೀಗಾಗಿ ನಾನು ಇದನ್ನು ಎಲ್ಲಿ ಬೇಕಾದರೂ ನಿರೂಪಿಸುತ್ತೇನೆ. ಅಂಬೇಡ್ಕರ್ ಅವರ ವಿಚಾರದಲ್ಲಿ ನಮ್ಮ ನಮ್ಮ ನಡುವೆಯೇ ಜಗಳ ಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇನ್ನೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಯಾರು? ಎರಡು ಬಾರಿ ಅಂಬೇಡ್ಕರ್ ಅವರನ್ನು ಸರ್ವಾನುಮತದಿಂದ ಆರಿಸಿ ತಂದಿದ್ದು ನಾವು. ರಾಜ್ಯಸಭಾ ಸದಸ್ಯರಾಗಿದ್ದ ಎಂ.ಆರ್. ಜೈಕರ್ ಅವರ ರಾಜೀನಾಮೆ ಕೊಡಿಸಿ, ಆ ಜಾಗದಲ್ಲಿ ಅಂಬೇಡ್ಕರ್ ಅವರನ್ನು ಆರಿಸಿ ತಂದಿದ್ದು ಕಾಂಗ್ರೆಸ್. ಹೀಗಿರುವಾಗ ಪಂಡಿತ್ ಜವಾಹರ್ ಲಾಲ್ ನೆಹರು ಅವರು, ಮಹಾತ್ಮ ಗಾಂಧೀಜಿಯವರು ಹಾಗೂ ನಮ್ಮ ಪಕ್ಷದ ಮೇಲೆ ಆಪಾದನೆ ಮಾಡುತ್ತೀರಿ, ನೀವು ಏನು ಮಾಡಿದಿರಿ ಅವರಿಗೆ? ಎಂದು ಪ್ರಶ್ನಿಸಿದ್ದಾರೆ.

ನೀವು ಹೇಳುತ್ತೀರಿ, “ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನ ಮನುಸ್ಮೃತಿ ಪ್ರಕಾರ ಇಲ್ಲ, ಅದಕ್ಕಾಗಿ ಈ ಸಂವಿಧಾನವನ್ನ ನಾವು ಒಪ್ಪುವುದಿಲ್ಲ, ತ್ರಿವರ್ಣ ಧ್ವಜವನ್ನ ಒಪ್ಪಲ್ಲ, ಅಶೋಕ ಚಕ್ರ ಒಪ್ಪಲ್ಲ,” ಎಂದು. ಹೀಗೆ ಹೇಳಿದವರು ಈಗ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಿದ್ದೀರಿ, ನಾಚಿಕೆಯಾಗಬೇಕು ನಿಮಗೆ. ನಿಮ್ಮ 50 ವರ್ಷಗಳ ಇತಿಹಾಸದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ತಮ್ಮ ಕಚೇರಿ ಮೇಲೆ ಎಂದೂ ತ್ರಿವರ್ಣ ಧ್ವಜ ಹಾರಿಸಿಲ್ಲ ಎಂದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

4 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

4 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

4 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

4 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

4 hours ago