ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ಸ್ವಯಂ ಘೋಷಿತ ದೇವಮಾನವ ಎಂದೇ ಹೆಸರಾಗಿದ್ದ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯರೊಂದಿಗೆ ಅಸಭ್ಯವಾಗಿ ವರ್ತಿಸುವ, ಅವರ ಕತ್ತು ಹಿಸುಕಿ ಹಿಂಸಿಸಿ ವಿಕೃತವಾಗಿ ಆನಂದಪಡುವ ವಿಲಕ್ಷಣ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಇದರ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಅಲ್ಲದೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ ಠಾಣೆಯಲ್ಲಿ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ.
ಬಂಧನ ಭೀತಿಯಲ್ಲಿರುವ ಮುತ್ಯಾ, ತಲೆಮರೆಸಿಕೊಂಡಿದ್ದು, ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ್ದಾರೆ. ತಾನು ಎಲ್ಲಿಯೂ ನಾಪತ್ತೆಯಾಗಿಲ್ಲ. ಬೇರೆ ಬೇರೆ ಮಠಗಳಿಗೆ ಭೇಟಿ ನೀಡುತ್ತಿದ್ದೇನೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ದೃಶ್ಯ ತಪ್ಪಾಗಿ ಭಾವಿಸಲಾಗಿದೆ. ತಾನು ಯಾವುದೇ ತಪ್ಪು ಮಾಡಿಲ್ಲ. ಅಸಭ್ಯವಾಗಿ ವರ್ತಿಸುವಂತದ್ದು ಅದರಲ್ಲಿ ಏನೂ ಇಲ್ಲ ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…