ರಾಜ್ಯ

ನಾನು, ಮೋದಿ, ಟ್ರಂಪ್‌ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗಾಗುತ್ತದೆ: ಮೆಲೋನಿ

ವಾಷಿಂಗ್ಟನ್‌: ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗೆ ಆಗುತ್ತದೆ ಎಂದು ಇಟಲಿ ಪ್ರಧಾನಿ ಜಾಜಿಯಾ ಮೆಲೋನಿ ಅವರು ಎಡಪಂಥೀಯ ನಾಯಕರಿಗೆ ಪ್ರಶ್ನಿಸಿದ್ದಾರೆ.

ವಾಷಿಂಗ್ಟನ್‌ನಲ್ಲಿ ಇಂದು(ಫೆಬ್ರವರಿ.24) ನಡೆದ ಕನ್ಸರ್ವೇಟಿವ್‌ ಪೊಲಿಟಿಕಲ್‌ ಆಕ್ಷನ್‌ ಕಾನ್ಫ್‌ರೆನ್ಸ್‌ನಲ್ಲಿ ವಿಡಿಯೋ ಮೂಲಕ ಮಾತನಾಡಿದ ಅವರು, ನಾನು, ಮೋದಿ ಹಾಗೂ ಟ್ರಂಪ್‌ನಂತಹ ಬಲಪಂಥೀಯ ನಾಯಕರು ಒಂದಾದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಕೂಗೆಬ್ಬಿಸುತ್ತಾರೆ. ಆದರೆ ಅದೇ ಎಡಪಂಥೀಯ ನಾಯಕರು ಇದೇ ರೀತಿ ಮೈತ್ರಿ ಮಾಡಿಕೊಂಡಾಗ ಪ್ರಶಂಸೆ ವ್ಯಕ್ತಪಡಿಸುತ್ತಾರೆ. ಎಡಪಂಥೀಯರು ಟ್ರಂಪ್ ಅವರ ಗೆಲುವಿನಿಂದ ಆತಂಕಕ್ಕೆ ಒಳಪಟ್ಟಿದ್ದಾರೆ. ಅಲ್ಲದೇ ಕನ್ಸರ್ವೇಟಿವ್‌ಗಳು ಗೆಲ್ಲುತ್ತಿರುವುದು ಮಾತ್ರವಲ್ಲ, ಅಂತಾರರಾಷ್ಟ್ರೀಯ ಮಟ್ಟದಲ್ಲೂ ಒಂದಾಗುತ್ತಿರುವುದು ಎಡಪಂಥೀಯರಿಗೆ ವಿಪರೀತ ಹೊಟ್ಟೆಯುರಿ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

ಹಿಂದಿನ ಬ್ರಿಟನ್‌ ಪ್ರಧಾನಿ ಟೋನಿ ಬ್ಲೇರ್‌ ಹಾಗೂ ಬಿಲ್‌ಕ್ಲಿಂಟನ್‌ ಅವರು 90 ದಶಕದಲ್ಲಿ ಅಂತಾರರಾಷ್ಟ್ರೀಯ ಎಡಪಂಥೀಯ ಉದಾರವಾದಿ ನೆಟ್‌ವರ್ಕ್‌ ರಚಿಸಿದಾಗ ಅವರನ್ನು ಮುತ್ಸದ್ದಿಗಳು ಎಂದು ಕರೆದಿದ್ದರು. ಆದರೆ ಇದೀಗ ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ, ಟ್ರಂಪ್‌ ಹಾಗೂ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್‌ ಅವರು ಪರಸ್ಪರ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎನ್ನುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ನಮಗೆ ಎಡಪಂಥೀಯವರ ದ್ವಿಮುಖ ನೀತಿ ಅಭ್ಯಾಸವಾಗಿದೆ. ಅವರು ನಮ್ಮ ಮೇಲೆ ಎಷ್ಟೇ ಕೆಸರು ಎರಚಿದರೂ ಎಡಪಂಥೀಯ ಸುಳ್ಳುಗಳನ್ನು ಸಾರ್ವಜನಿಕರು ನಂಬದೇ ನಮಗೆ ಮತಗಳನ್ನು ಹಾಕುತ್ತಿದ್ದಾರೆ. ನಾವು ಸ್ವಾತಂತ್ರ್ಯವನು ರಕ್ಷಿಸುತ್ತೇವೆ, ಆದೆ ಹಸಿರು ಎಡಪಂಥಯರು ಹುಚ್ಚುತನದಿಂದ ಜನರನ್ನು ರಕ್ಷಿಸುತ್ತೇವೆ ಎಂದು ನುಡಿಯುತ್ತಾರೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

4 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

6 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

7 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

7 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

10 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago