ರಾಜ್ಯ

ನಾನು, ಮೋದಿ, ಟ್ರಂಪ್‌ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗಾಗುತ್ತದೆ: ಮೆಲೋನಿ

ವಾಷಿಂಗ್ಟನ್‌: ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಂದಾಗಿ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹೇಗೆ ಆಗುತ್ತದೆ ಎಂದು ಇಟಲಿ ಪ್ರಧಾನಿ ಜಾಜಿಯಾ ಮೆಲೋನಿ ಅವರು ಎಡಪಂಥೀಯ ನಾಯಕರಿಗೆ ಪ್ರಶ್ನಿಸಿದ್ದಾರೆ.

ವಾಷಿಂಗ್ಟನ್‌ನಲ್ಲಿ ಇಂದು(ಫೆಬ್ರವರಿ.24) ನಡೆದ ಕನ್ಸರ್ವೇಟಿವ್‌ ಪೊಲಿಟಿಕಲ್‌ ಆಕ್ಷನ್‌ ಕಾನ್ಫ್‌ರೆನ್ಸ್‌ನಲ್ಲಿ ವಿಡಿಯೋ ಮೂಲಕ ಮಾತನಾಡಿದ ಅವರು, ನಾನು, ಮೋದಿ ಹಾಗೂ ಟ್ರಂಪ್‌ನಂತಹ ಬಲಪಂಥೀಯ ನಾಯಕರು ಒಂದಾದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎಂದು ಕೂಗೆಬ್ಬಿಸುತ್ತಾರೆ. ಆದರೆ ಅದೇ ಎಡಪಂಥೀಯ ನಾಯಕರು ಇದೇ ರೀತಿ ಮೈತ್ರಿ ಮಾಡಿಕೊಂಡಾಗ ಪ್ರಶಂಸೆ ವ್ಯಕ್ತಪಡಿಸುತ್ತಾರೆ. ಎಡಪಂಥೀಯರು ಟ್ರಂಪ್ ಅವರ ಗೆಲುವಿನಿಂದ ಆತಂಕಕ್ಕೆ ಒಳಪಟ್ಟಿದ್ದಾರೆ. ಅಲ್ಲದೇ ಕನ್ಸರ್ವೇಟಿವ್‌ಗಳು ಗೆಲ್ಲುತ್ತಿರುವುದು ಮಾತ್ರವಲ್ಲ, ಅಂತಾರರಾಷ್ಟ್ರೀಯ ಮಟ್ಟದಲ್ಲೂ ಒಂದಾಗುತ್ತಿರುವುದು ಎಡಪಂಥೀಯರಿಗೆ ವಿಪರೀತ ಹೊಟ್ಟೆಯುರಿ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ.

ಹಿಂದಿನ ಬ್ರಿಟನ್‌ ಪ್ರಧಾನಿ ಟೋನಿ ಬ್ಲೇರ್‌ ಹಾಗೂ ಬಿಲ್‌ಕ್ಲಿಂಟನ್‌ ಅವರು 90 ದಶಕದಲ್ಲಿ ಅಂತಾರರಾಷ್ಟ್ರೀಯ ಎಡಪಂಥೀಯ ಉದಾರವಾದಿ ನೆಟ್‌ವರ್ಕ್‌ ರಚಿಸಿದಾಗ ಅವರನ್ನು ಮುತ್ಸದ್ದಿಗಳು ಎಂದು ಕರೆದಿದ್ದರು. ಆದರೆ ಇದೀಗ ನಾನು, ಭಾರತದ ಪ್ರಧಾನಿ ನರೇಂದ್ರ ಮೋದಿ, ಟ್ರಂಪ್‌ ಹಾಗೂ ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್‌ ಅವರು ಪರಸ್ಪರ ಚರ್ಚಿಸಿದರೆ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಎನ್ನುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ನಮಗೆ ಎಡಪಂಥೀಯವರ ದ್ವಿಮುಖ ನೀತಿ ಅಭ್ಯಾಸವಾಗಿದೆ. ಅವರು ನಮ್ಮ ಮೇಲೆ ಎಷ್ಟೇ ಕೆಸರು ಎರಚಿದರೂ ಎಡಪಂಥೀಯ ಸುಳ್ಳುಗಳನ್ನು ಸಾರ್ವಜನಿಕರು ನಂಬದೇ ನಮಗೆ ಮತಗಳನ್ನು ಹಾಕುತ್ತಿದ್ದಾರೆ. ನಾವು ಸ್ವಾತಂತ್ರ್ಯವನು ರಕ್ಷಿಸುತ್ತೇವೆ, ಆದೆ ಹಸಿರು ಎಡಪಂಥಯರು ಹುಚ್ಚುತನದಿಂದ ಜನರನ್ನು ರಕ್ಷಿಸುತ್ತೇವೆ ಎಂದು ನುಡಿಯುತ್ತಾರೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

9 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

10 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago