ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು ವಿಜೇತರಾಗಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಡೆದ ಮರುಮತ ಎಣಿಕೆಯಲ್ಲಿ ಈ ಹಿಂದೆ ವಿಜೇತರಾಗಿದ್ದ ನಂಜೇಗೌಡ ಅವರು 250 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.
ಸುಪ್ರೀಂ ಕೋರ್ಟ್ ಸೂಚನೆಯಂತೆ ಕೆಲ ತಿಂಗಳ ಹಿಂದೆ ಮರು ಎಣಿಕೆ ನಡೆಸಿತ್ತು. ನ್ಯಾಯಾಲಯ ಫಲಿತಾಂಶ ಬಹಿರಂಗ ಪಡಿಸಿದೆ. ಒಟ್ಟು 250 ಮತಗಳ ಅಂತರದಲ್ಲಿ ಕೆ ವೈ ನಂಜೇಗೌಡ ಗೆಲುವು ಸಾಧಿಸಿದ್ದಾರೆ. ಇನ್ನು 2023 ರಲ್ಲಿ ಮತ ಎಣಿಕೆಯಾಗಿದ್ದಾಗ 248 ಮತಗಳಿಂದ ಜಯಗಳಿದ್ದರು. ಈ ಬಾರಿ 2 ಮತ ಹೆಚ್ಚು ಲಭಿಸಿವೆ.
2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕಾಂಗ್ರೆಸ್ ಸದಸ್ಯ ಕೆ ವೈ ನಂಜೇಗೌಡ ಅವರ ಆಯ್ಕೆಯಾಗಿದ್ದರು. ಮತ ಎಣಿಕೆಯಲ್ಲಿ ಅಕ್ರಮ ನಡೆಸಿದ್ದು, ಮರು ಮತ ಎಣಿಕೆ ನಡೆಸಬೇಕು ಎಂದು ಬಿಜೆಪಿ ಅಭ್ಯರ್ಥಿ ಕೆಎಸ್ ಮಂಜುನಾಥ್ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹೈಕೋರ್ಟ್ ಕೆವೈ ನಂಜೇಗೌಡ ಅವರ ಸ್ಥಾನವನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನೆ ಮಾಡಿ ಶಾಸಕರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್ ಮರು ಎಣಿಕೆ ಮಾಡಿ ಫಲಿತಾಂಶ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.
ತಮ್ಮ ಶಾಸಕ ಸ್ಥಾನವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ, ನಂಜೇಗೌಡ ಅವರ ಆಯ್ಕೆಯನ್ನು ಎತ್ತಿ ಹಿಡಿದಿದೆ. ಈ ಮೂಲಕ ಕಾಂಗ್ರೆಸ್ ಶಾಸಕರ ಆಯ್ಕೆಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ 2025ರ ಸೆಪ್ಟಂಬರ್ನಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು.
ವಿಚಾರಣೆ ವೇಳೆ ಎಲ್ಲರ ಸಮ್ಮುಖದಲ್ಲಿ ಪೀಠವು ಮುಚ್ಚಿದ ಲಕೋಟೆಯನ್ನು ನ್ನು ತೆರೆದಿದ್ದು, ಮರು ಎಣಿಕೆಯಲ್ಲೂ ನಂಜೇಗೌಡರು ಹೆಚ್ಚು ಮತ ಪಡೆದಿದ್ದಾರೆ. ನಂಜೇಗೌಡರು 50,957 ಮತಗಳನ್ನು ಗಳಿಸಿದರೆ ಮಂಜುನಾಥ ಗೌಡರು 50,707 ಮತಗಳನ್ನು ಪಡೆದಿರುವುದನ್ನು ಪೀಠ ಗಮನಿಸಿತು. ಹೈಕೋರ್ಟ್ ಹೊರಡಿಸಿದ ಮರು ಮತ ಎಣಿಕೆ ನಿರ್ದೇಶನದ ಬಳಿಕವೂ ಮಾಲೂರಿನ ಅಭ್ಯರ್ಥಿಯ ಆಯ್ಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೀಠ ತಿಳಿಸಿತು. ಹಿರಿಯ ವಕೀಲ ಸಿಂಘ್ವಿ ಅವರು ಅರ್ಜಿದಾರರ ಪರವಾಗಿ ಪೀಠದ ಮುಂದೆ ಹಾಜರಾಗಿದ್ದರು.
ಪ್ರಕರಣದ ಹಿನ್ನೆಲೆ
2023ರ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ. ನಂಜೇಗೌಡ ಗೆಲುವು ಸಾಧಿಸಿದ್ದರು. ಫಲಿತಾಂಶದಲ್ಲಿ ಗೋಲ್ ಮಾಲ್ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥ್ ಆರೋಪಿಸಿದ್ದರು.
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…
ಮೈಸೂರು : ಯುಪಿಎಸ್ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…
ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…