ರಾಜ್ಯ

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು ವಿಜೇತರಾಗಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಡೆದ ಮರುಮತ ಎಣಿಕೆಯಲ್ಲಿ ಈ ಹಿಂದೆ ವಿಜೇತರಾಗಿದ್ದ ನಂಜೇಗೌಡ ಅವರು 250 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ.

ಸುಪ್ರೀಂ ಕೋರ್ಟ್‌ ಸೂಚನೆಯಂತೆ ಕೆಲ ತಿಂಗಳ ಹಿಂದೆ ಮರು ಎಣಿಕೆ ನಡೆಸಿತ್ತು. ನ್ಯಾಯಾಲಯ ಫಲಿತಾಂಶ ಬಹಿರಂಗ ಪಡಿಸಿದೆ. ಒಟ್ಟು 250 ಮತಗಳ ಅಂತರದಲ್ಲಿ ಕೆ ವೈ ನಂಜೇಗೌಡ ಗೆಲುವು ಸಾಧಿಸಿದ್ದಾರೆ. ಇನ್ನು 2023 ರಲ್ಲಿ ಮತ ಎಣಿಕೆಯಾಗಿದ್ದಾಗ 248 ಮತಗಳಿಂದ ಜಯಗಳಿದ್ದರು. ಈ ಬಾರಿ 2 ಮತ ಹೆಚ್ಚು ಲಭಿಸಿವೆ.

2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕಾಂಗ್ರೆಸ್ ಸದಸ್ಯ ಕೆ ವೈ ನಂಜೇಗೌಡ ಅವರ ಆಯ್ಕೆಯಾಗಿದ್ದರು. ಮತ ಎಣಿಕೆಯಲ್ಲಿ ಅಕ್ರಮ ನಡೆಸಿದ್ದು, ಮರು ಮತ ಎಣಿಕೆ ನಡೆಸಬೇಕು ಎಂದು ಬಿಜೆಪಿ ಅಭ್ಯರ್ಥಿ ಕೆಎಸ್‌ ಮಂಜುನಾಥ್ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ವೇಳೆ ಹೈಕೋರ್ಟ್‌ ಕೆವೈ ನಂಜೇಗೌಡ ಅವರ ಸ್ಥಾನವನ್ನು ರದ್ದು ಮಾಡಿ ಆದೇಶ ಹೊರಡಿಸಿತ್ತು. ಇದನ್ನ ಪ್ರಶ್ನೆ ಮಾಡಿ ಶಾಸಕರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ ಮರು ಎಣಿಕೆ ಮಾಡಿ ಫಲಿತಾಂಶ ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

ತಮ್ಮ ಶಾಸಕ ಸ್ಥಾನವನ್ನು ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್​​ಮಲ್ಯ ಬಾಗ್ಚಿ ಅವರಿದ್ದ ಪೀಠ, ನಂಜೇಗೌಡ ಅವರ ಆಯ್ಕೆಯನ್ನು ಎತ್ತಿ ಹಿಡಿದಿದೆ. ಈ ಮೂಲಕ ಕಾಂಗ್ರೆಸ್ ಶಾಸಕರ ಆಯ್ಕೆಯನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್‌ 2025ರ ಸೆಪ್ಟಂಬರ್​ನಲ್ಲಿ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು.

ವಿಚಾರಣೆ ವೇಳೆ ಎಲ್ಲರ ಸಮ್ಮುಖದಲ್ಲಿ ಪೀಠವು ಮುಚ್ಚಿದ ಲಕೋಟೆಯನ್ನು ನ್ನು ತೆರೆದಿದ್ದು, ಮರು ಎಣಿಕೆಯಲ್ಲೂ ನಂಜೇಗೌಡರು ಹೆಚ್ಚು ಮತ ಪಡೆದಿದ್ದಾರೆ. ನಂಜೇಗೌಡರು 50,957 ಮತಗಳನ್ನು ಗಳಿಸಿದರೆ ಮಂಜುನಾಥ ಗೌಡರು 50,707 ಮತಗಳನ್ನು ಪಡೆದಿರುವುದನ್ನು ಪೀಠ ಗಮನಿಸಿತು. ಹೈಕೋರ್ಟ್ ಹೊರಡಿಸಿದ ಮರು ಮತ ಎಣಿಕೆ ನಿರ್ದೇಶನದ ಬಳಿಕವೂ ಮಾಲೂರಿನ ಅಭ್ಯರ್ಥಿಯ ಆಯ್ಕೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೀಠ ತಿಳಿಸಿತು. ಹಿರಿಯ ವಕೀಲ ಸಿಂಘ್ವಿ ಅವರು ಅರ್ಜಿದಾರರ ಪರವಾಗಿ ಪೀಠದ ಮುಂದೆ ಹಾಜರಾಗಿದ್ದರು.

ಪ್ರಕರಣದ ಹಿನ್ನೆಲೆ
2023ರ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ. ನಂಜೇಗೌಡ ಗೆಲುವು ಸಾಧಿಸಿದ್ದರು. ಫಲಿತಾಂಶದಲ್ಲಿ ಗೋಲ್​ ಮಾಲ್​ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥ್ ಆರೋಪಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

49 mins ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

2 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

2 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

7 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

10 hours ago