ಶ್ರೀರಂಗಪಟ್ಟಣ : ಮಂಡ್ಯ ಜಿಲ್ಲೆಯಲ್ಲಿ ೫ ಲಕ್ಷ ಹೆಕ್ಟೇರ್ ಪ್ರದೇಶಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲಾಗಿದೆ, ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ೧.೭೦ ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಳಕೆ ಮಾಡಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ತಿಳಿಸಿದರು.
ಪಟ್ಟಣದಲ್ಲಿ ದಸರಾ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರೈತ ದಸರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಯೂರಿಯಾ ಬಳಸುವ ಜಿಲ್ಲೆಗಳಲ್ಲಿ ಮಂಡ್ಯ ಜಿಲ್ಲೆಯೂ ಒಂದಾಗಿದೆ. ಅತಿಯಾದ ಯೂರಿಯಾ ಬಳಕೆಯಿಂದ ಭೂಮಿಯ ಫಲವತ್ತತೆ ಹಾಗೂ ಬೆಳೆಯ ಗುಣಮಟ್ಟ ಕುಸಿಯುತ್ತದೆ ಎಂದು ಎಚ್ಚರಿಸಿದರು.
ರಾಷ್ಟ್ರೀಯ ನೈಸರ್ಗಿಕ ಕೃಷಿ ಪದ್ಧತಿಯನ್ನು ಸದರಿ ವರ್ಷ ಜಾರಿಗೊಳಿಸಲಾಗಿದೆ.ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ಸಾವಯವ ಗೊಬ್ಬರ ಉಪಯೋಗಿಸಬೇಕೆಂದು ರೈತರಿಗೆ ಸಲಹೆ ನೀಡಿದರು.
ಇದನ್ನು ಓದಿ : ಸಿಎಂ ನಗರ ಪ್ರದಕ್ಷಿಣೆ : ರಸ್ತೆಯಲ್ಲಿ ತ್ಯಾಜ್ಯ ನೋಡಿ ಸಿಎಂ ಗರಂ
ಬೆಲ್ಲದನಾಡು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಕಾರಸವಾಡಿ ಮಹಾದೇವ ಮಾತನಾಡಿ, ಜಿಲ್ಲೆಯ ಬಸರಾಳು ರೈತ ಉತ್ಪಾದಕ ಕಂಪೆನಿ ೬ ಕೋಟಿ ರೂಗಳಿಗೂ ಅಽಕ ವಹಿವಾಟು ನಡೆಸಿದೆ. ಪ್ರಗತಿಪರ ಕೃಷಿಕರಿಗೆ ಇದು ಒಂದು ಪ್ರೇರಣೆಯಾಗಿದೆ. ರಾಸಾಯನಿಕ ಮುಕ್ತ ಬೆಳೆಗಳಿಗೆ ದೇಶ ವಿದೇಶಗಳಲ್ಲಿ ಉತ್ತಮ ಬೆಲೆ ಇದೆ, ರೈತರು ಬೆಳೆದ ಬೆಳೆಯನ್ನು ಬ್ರ್ಯಾಂಡಿಂಗ್ ಮತ್ತು ಪ್ಯಾಕಿಂಗ್ ಮಾಡಲು ಕೃಷಿ ಇಲಾಖೆ ಸಹಾಯಧನ ನೀಡುತ್ತದೆ ಎಂದು ತಿಳಿಸಿದರು.
ನೇಸರ ಆಗ್ರಿ ಸಂಸ್ಥೆಯ ಸಂಸ್ಧಾಪಕಿ ರೇಷ್ಮಾ ರಾಣಿ ಅವರು ಮಾತನಾಡಿ, ಭಾರತದಲ್ಲಿ ೫ ಗ್ಲೋಬಲ್ ಗ್ಯಾಪ್ ಗುಡ್ ಅಗ್ರಿಕಲ್ಚರಲ್ ಪ್ರಾಕ್ಟಿಸ್ ಕಾರ್ಯ ನಿರ್ವಹಿಸುತ್ತಿವೆ, ರೈತರು ಇವರ ಬಳಿ ಹೋಗಿ ಬೆಳೆಯನ್ನು ಪ್ರಮಾಣಿಕರಿಸಿದರೆ ಅವರು ಬೆಳೆಯುವ ಬೆಳೆಗೆ ಉತ್ತಮ ಬೆಲೆ ಸಿಗುತ್ತದೆ ಎಂದು ಹೇಳಿದರು.
ಪಶು ವೈದ್ಯಕೀಯ ವಿಶ್ವವಿದ್ಯಾನಿಲಯದ ಸಹ ಪ್ರಾಧ್ಯಾಪಕ ಡಾ.ಎಚ್.ಎಸ್.ಮಧುಸೂದನ್, ಹೈನುಗಾರಿಕೆ ಕುರಿತು ಸಮಗ್ರ ಮಾಹಿತಿ ನೀಡಿದರು. ತಹಸಿಲ್ದಾರ್ ಚೇತನ ಯಾದವ್, ಕೃಷಿ ತಜ್ಞರು, ಜಿಲ್ಲೆಯ ವಿವಿಧ ರೈತ ಉತ್ಪಾದಕ ಕಂಪೆನಿಗಳ ಮಾಲೀಕರು, ಇತರ ಗಣ್ಯರು ಉಪಸ್ಥಿತರಿದ್ದರು.
ಮಡಿಕೇರಿ: ಕಾಡಾನೆ ದಾಳಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ವಾಲ್ನೂರಿನಲ್ಲಿ…
ಬೆಂಗಳೂರು: ವಿಧಾನಮಂಡಲ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ನಾಳೆ ಮಾರ್ಚ್.10ರಂದು ಸಂಜೆ ಬೆಂಗಳೂರಿನ…
ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಪುರಾತನ ಶ್ರೀ ನಾರಾಯಣಸ್ವಾಮಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮವು…
ಬೆಂಗಳೂರು: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಂ ರಚನೆ ಮಾಡಿದ್ದಾರೆ. ಉಪಚುನಾವಣೆಗೆ ಉಸ್ತುವಾರಿ ಸಮಿತಿ ರಚನೆ…
ಬೆಂಗಳೂರು: ಆರ್ಎಸ್ಎಸ್ ಮುಗಿಸುತ್ತೇವೆ ಎನ್ನುವವರು ಭ್ರಮೆಯಲ್ಲಿದ್ದಾರೆ. ನಮ್ಮ ಸಂಘಟನೆಯನ್ನು ಯಾರಿಂದಲೂ ನಿಲ್ಲಿಸಲು ಸಾಧ್ಯವಿಲ್ಲ ಎಂಬ ಕೇಂದ್ರದ ಮಾಜಿ ಸಚಿವ ಅನಂತ್…