ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ತಮ್ಮ ಫಾರ್ಮ್ ಹೌಸ್ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್ಎಸ್ ಡ್ಯಾಂನಿಂದ ಫಾರ್ಮ್ಹೌಸ್ಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಸಂಬಂಧ ಮಾಹಿತಿ ನೀಡಿದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ
ಕೆಆರ್ಎಸ್ ಡ್ಯಾಂನ ಹಿನ್ನೀರಿಗೆ ಹೊಂದಿಕೊಂಡು ಫಾರ್ಮ್ ಹೌಸ್ ಇದೆ. ಈ ಫಾರ್ಮ್ಹೌಸ್ಗೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ಸುಮಾರು 200 ಮೀ. ಪೈಪ್ ಅಳವಡಿಸಿಕೊಂಡು ಜಲಾಯಶಯದ ನೀರಿಗೆ ಕನ್ನ ಹಾಕಿ, ಅಕ್ರಮವಾಗಿ ಫಾರ್ಮ್ಹೌಸ್ಗೆ ನೀರು ಪೂರೈಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿರು ಆಕ್ರೋಶ ಹೊರಹಾಕಿದ್ದಾರೆ.
ಬಗ್ಗೆ ಟಿವಿ 9 ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಇ ಸುರೇಶ್ ಬಾಬು, ಎಇಇ ಕಿಶೋರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯುತ್ ಕಡಿತಗೊಳಿಸಿ, ಕೆಆರ್ಎಸ್ ಹಿನ್ನೀರಿಗೆ ಅಳವಡಿಸಿದ್ದ ಮೋಟಾರ್ಗಳನ್ನು ತೆರವು ಮಾಡಿದ್ದಾರೆ.
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…
ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…
ಹೇಮಂತ್ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…