ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ತಮ್ಮ ಫಾರ್ಮ್ ಹೌಸ್ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್ಎಸ್ ಡ್ಯಾಂನಿಂದ ಫಾರ್ಮ್ಹೌಸ್ಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಸಂಬಂಧ ಮಾಹಿತಿ ನೀಡಿದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ
ಕೆಆರ್ಎಸ್ ಡ್ಯಾಂನ ಹಿನ್ನೀರಿಗೆ ಹೊಂದಿಕೊಂಡು ಫಾರ್ಮ್ ಹೌಸ್ ಇದೆ. ಈ ಫಾರ್ಮ್ಹೌಸ್ಗೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ಸುಮಾರು 200 ಮೀ. ಪೈಪ್ ಅಳವಡಿಸಿಕೊಂಡು ಜಲಾಯಶಯದ ನೀರಿಗೆ ಕನ್ನ ಹಾಕಿ, ಅಕ್ರಮವಾಗಿ ಫಾರ್ಮ್ಹೌಸ್ಗೆ ನೀರು ಪೂರೈಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿರು ಆಕ್ರೋಶ ಹೊರಹಾಕಿದ್ದಾರೆ.
ಬಗ್ಗೆ ಟಿವಿ 9 ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಇ ಸುರೇಶ್ ಬಾಬು, ಎಇಇ ಕಿಶೋರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯುತ್ ಕಡಿತಗೊಳಿಸಿ, ಕೆಆರ್ಎಸ್ ಹಿನ್ನೀರಿಗೆ ಅಳವಡಿಸಿದ್ದ ಮೋಟಾರ್ಗಳನ್ನು ತೆರವು ಮಾಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…