ರಾಜ್ಯ

ಮಂಡ್ಯ: ಕೆಆರ್‌ಎಸ್‌ ಜಲಾಶಯಕ್ಕೆ ಅಕ್ರಮ ಮೋಟಾರ್‌ ಅಳವಡಿಕೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯಕ್ಕೆ ಅಕ್ರಮವಾಗಿ ಮೋಟಾರ್‌ ಅಳವಡಿಕೆ ಮಾಡಿ ತಮ್ಮ ಫಾರ್ಮ್‌ ಹೌಸ್‌ಗಳಿಗೆ ನೀರು ಪೂರೈಕೆ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಕುಡಿಯುವ ನೀರಿನ ಸಮಸ್ಯೆ ನಡುವೆ ಅಕ್ರಮ ಮೋಟಾರ್ ಅಳವಡಿಸಿ ಕೆಆರ್​ಎಸ್ ಡ್ಯಾಂನಿಂದ ಫಾರ್ಮ್​ಹೌಸ್​ಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಸಂಬಂಧ ಮಾಹಿತಿ ನೀಡಿದರೂ ಅಧಿಕಾರಿಗಳು ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ

ಕೆಆರ್​ಎಸ್​ ಡ್ಯಾಂನ ಹಿನ್ನೀರಿಗೆ ಹೊಂದಿಕೊಂಡು ಫಾರ್ಮ್ ಹೌಸ್ ಇದೆ. ಈ ಫಾರ್ಮ್​ಹೌಸ್​ಗೆ ಅಕ್ರಮವಾಗಿ ಮೋಟಾರ್ ಅಳವಡಿಕೆ ಮಾಡಿ ಸುಮಾರು 200 ಮೀ. ಪೈಪ್ ಅಳವಡಿಸಿಕೊಂಡು ಜಲಾಯಶಯದ ನೀರಿಗೆ ಕನ್ನ ಹಾಕಿ, ಅಕ್ರಮವಾಗಿ ಫಾರ್ಮ್​ಹೌಸ್​ಗೆ ನೀರು ಪೂರೈಕೆ ಮಾಡುತ್ತಿರುವ ಬಗ್ಗೆ ಸಾರ್ವಜನಿರು ಆಕ್ರೋಶ ಹೊರಹಾಕಿದ್ದಾರೆ.

ಬಗ್ಗೆ ಟಿವಿ 9 ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಇ ಸುರೇಶ್ ಬಾಬು, ಎಇಇ ಕಿಶೋರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯುತ್‌ ಕಡಿತಗೊಳಿಸಿ, ಕೆಆರ್‌ಎಸ್​​ ಹಿನ್ನೀರಿಗೆ ಅಳವಡಿಸಿದ್ದ ಮೋಟಾರ್​ಗಳನ್ನು ತೆರವು ಮಾಡಿದ್ದಾರೆ.

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

5 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

5 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

5 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

5 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

5 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

5 hours ago