ರಾಜ್ಯ

ಮಂಡ್ಯ ಕ್ಷೇತ್ರ ಬಿಟ್ಟು ಎಲ್ಲೂ ಹೋಗಲ್ಲ: ಸುಮಲತಾ ಅಂಬರೀಶ್‌ ಸ್ಪಷ್ಟನೆ

ಮಂಡ್ಯ: ನಾನು ರಾಜಕೀಯಕ್ಕೆ ಬಂದಿದ್ದೇ ಮಂಡ್ಯಕ್ಕಾಗಿ, ಮಂಡ್ಯ ಬಿಟ್ಟು ಬೇರೆ ಕಡೆ ಸ್ಪರ್ಧೆ ಬಂದರೇ ನನಗೆ ರಾಜಕೀಯವೇ ಬೇಡ ಎಂದು ಮಂಡ್ಯ ಲೋಕಸಭಾ ಕ್ಷೇತ್ರ ಸಂಸದೆ ಸುಮಲತಾ ಅಂಬರೀಶ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಬಿಟ್ಟು ಬೇರೆ ಕಡೆ ಚುನಾವಣೆಗೆ ಸ್ಪರ್ಧೆ ಮಾಡುದಿಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆಯೇ ಹೊಸ ಜಿಲ್ಲಾಧ್ಯಕ್ಷರು ಬಂದು ಭೇಟಿಯಾಗಿದ್ದರು. ಜಿಲ್ಲೆಯಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂಬ ವಿಷಯವಾಗಿ ಚರ್ಚೆ ಮಾಡಿದ್ದೇವು. ಹಾಲಿ ಸಂಸದರು ಎಂಬ ಸ್ಥಾನ ಮಾನ ಇದ್ದೇ ಇದೆ, ಸಿಟ್ಟಿಂಗ್ ಎಂಪಿಗೆ ಟಿಕೆಟ್ ಕೊಡುವುದು ಎಲ್ಲಾ ಪಕ್ಷಗಳಲ್ಲೂ ವಾಡಿಕೆ. ಫಸ್ಟ್ ಟೈಮ್ ಮಂಡ್ಯದಲ್ಲಿ ಹೆಚ್ಚು ಮತ ಪಕ್ಷಕ್ಕೆ ಬಂದಿದೆ, ಆದ್ದರಿಂದ ಮಂಡ್ಯದಲ್ಲಿ ಬಿಜೆಪಿಯನ್ನು ಉಳಿಸಬೇಕು. ಮಂಡ್ಯದಲ್ಲಿ ಉಳಿಸಿಕೊಂಡರೆ ನಾವು ಗೆದ್ದೆ ಗೆಲ್ತೀವಿ ಎಂದು ಸುಮಲತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಲ್ಲದೇ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡ್ತಿವಿ ಅನ್ನೋ ವಿಚಾರ ಇದುವರೆಗೂ ಎಲ್ಲೂ ಬಂದಿಲ್ಲ. ಮೈತ್ರಿ ಅನ್ನೋದು ಅವರಿಗೆ ಬಿಟ್ಟಿದ್ದು, ನನ್ನ ಪೋಕಸ್ ಏನಿದ್ದರೂ ನನ್ನ ಜಿಲ್ಲೆ ಮಾತ್ರ. ಫಸ್ಟ್ ಟೈಮ್ ಎಂಪಿ ತರ ನನ್ನ‌ ರೆಕಾರ್ಡ್ ಇಲ್ಲ. ನನ್ನ ಬಗ್ಗೆ ಕಪ್ಪು ಚುಕ್ಕಿ ಇಲ್ಲ ಇದೆಲ್ಲ ಬಿಜೆಪಿಗೆ ಗೊತ್ತಿದೆ. ಇಂತ ವಾತಾವರಣದಲ್ಲಿ ಬಿಜೆಪಿ ಮಂಡ್ಯ ಸೀಟ್ ಉಳಿಸಿಕೊಳ್ಳುತ್ತೆ ಅನ್ನೋ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಉತ್ತರಿಸಿದ ಸುಮಲತಾ ಅವರು, ಯಾರು ಯಾರನ್ನ ಬೇಕಾದರೂ ಭೇಟಿ ಅಗಲಿ ಅದು ಬೇರೆ ವಿಚಾರ, ನನ್ನ ಸ್ಪರ್ಧೆ ಬಗ್ಗೆ ಸಾಕಷ್ಟು ಊಹಾಪೋಹಗಳ ಇವೆ. ನಾನು ರಾಜಕೀಯಕ್ಕೆ ಬಂದಿರೋದೆ ಮಂಡ್ಯಕ್ಕಾಗಿ, ಮಂಡ್ಯದ ಜನ ಸಾಕಷ್ಟು ಪ್ರೀತಿ ಅಭಿಮಾನ ಸಿಕ್ಕಿದೆ. ಅದನ್ನ ಬಿಟ್ಟು ನಾನು ಬೇರೆ ಕಡೆ ಹೋಗಲ್ಲ. ಅದು ನನಗೆ ಅನಿವಾರ್ಯ ಅಲ್ಲ. ನಾನು ಬೇರೆ ಯಾವ ಕಡೆಗೂ ಹೋಗೋದಿಲ್ಲ. ಅಂಬರೀಶ್ ಹೋದಾಗ ನನಗೂ ಒಂದು ಜವಾಬ್ದಾರಿ ಕೊಟ್ಟು ಹೋಗಿದ್ದಾರೆ ಎಂದು ಸುಮಲತಾ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.

ಇನ್ನು ಕಾಂಗ್ರೆಸ್‌ನಿಂದ ಟಿಕೆಟ್‌ ಆಫರ್‌ ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಕಾಂಗ್ರೆಸ್‌ ಬಳಿ ಟಿಕೆಟ್‌ ಕೇಳಿಲ್ಲ ಎಂದು ವಿವರಿಸಿದ್ದಾರೆ.

andolanait

Recent Posts

ಸಿದ್ಧಗಂಗಾ ಶ್ರೀಗಳ ಜಯಂತಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು…

1 hour ago

ರಷ್ಯಾದ ಸೇನಾ ವಿಮಾನ ಪತನ: 29 ಪ್ರಯಾಣಿಕರು ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾ ಸೇನಾ ವಿಮಾನ ಪತನಗೊಂಡ ಪರಿಣಾಮ 29 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ರಕ್ಷಣಾ ಸಚಿವಾಲಯದ…

1 hour ago

ಮುಂದಿನ 2-3 ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್:‌ ಮುಂದಿನ ಎರಡು ಅಥವಾ ಮೂರು ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌…

2 hours ago

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ: ಸಿದ್ಧಗಂಗಾ ಮಠದಲ್ಲಿ ಸಂಭ್ರಮ

ತುಮಕೂರು: ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿಂದು ಮಠದಲ್ಲಿ ಸಂಭ್ರಮ ಕಳೆಗಟ್ಟಿದೆ. ಇಂದು ಬೆಳಿಗ್ಗೆಯಿಂದಲೇ ಪೂಜಾ…

3 hours ago

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

3 hours ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

4 hours ago