ಮಂಡ್ಯ: ನಾನು ರಾಜಕೀಯಕ್ಕೆ ಬಂದಿದ್ದೇ ಮಂಡ್ಯಕ್ಕಾಗಿ, ಮಂಡ್ಯ ಬಿಟ್ಟು ಬೇರೆ ಕಡೆ ಸ್ಪರ್ಧೆ ಬಂದರೇ ನನಗೆ ರಾಜಕೀಯವೇ ಬೇಡ ಎಂದು ಮಂಡ್ಯ ಲೋಕಸಭಾ ಕ್ಷೇತ್ರ ಸಂಸದೆ ಸುಮಲತಾ ಅಂಬರೀಶ್ ಅವರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಆಪ್ತರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಬಿಟ್ಟು ಬೇರೆ ಕಡೆ ಚುನಾವಣೆಗೆ ಸ್ಪರ್ಧೆ ಮಾಡುದಿಲ್ಲ ಎಂದು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆಯೇ ಹೊಸ ಜಿಲ್ಲಾಧ್ಯಕ್ಷರು ಬಂದು ಭೇಟಿಯಾಗಿದ್ದರು. ಜಿಲ್ಲೆಯಲ್ಲಿ ಯಾವ ರೀತಿ ಕೆಲಸ ಮಾಡಬೇಕು ಎಂಬ ವಿಷಯವಾಗಿ ಚರ್ಚೆ ಮಾಡಿದ್ದೇವು. ಹಾಲಿ ಸಂಸದರು ಎಂಬ ಸ್ಥಾನ ಮಾನ ಇದ್ದೇ ಇದೆ, ಸಿಟ್ಟಿಂಗ್ ಎಂಪಿಗೆ ಟಿಕೆಟ್ ಕೊಡುವುದು ಎಲ್ಲಾ ಪಕ್ಷಗಳಲ್ಲೂ ವಾಡಿಕೆ. ಫಸ್ಟ್ ಟೈಮ್ ಮಂಡ್ಯದಲ್ಲಿ ಹೆಚ್ಚು ಮತ ಪಕ್ಷಕ್ಕೆ ಬಂದಿದೆ, ಆದ್ದರಿಂದ ಮಂಡ್ಯದಲ್ಲಿ ಬಿಜೆಪಿಯನ್ನು ಉಳಿಸಬೇಕು. ಮಂಡ್ಯದಲ್ಲಿ ಉಳಿಸಿಕೊಂಡರೆ ನಾವು ಗೆದ್ದೆ ಗೆಲ್ತೀವಿ ಎಂದು ಸುಮಲತಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡ್ತಿವಿ ಅನ್ನೋ ವಿಚಾರ ಇದುವರೆಗೂ ಎಲ್ಲೂ ಬಂದಿಲ್ಲ. ಮೈತ್ರಿ ಅನ್ನೋದು ಅವರಿಗೆ ಬಿಟ್ಟಿದ್ದು, ನನ್ನ ಪೋಕಸ್ ಏನಿದ್ದರೂ ನನ್ನ ಜಿಲ್ಲೆ ಮಾತ್ರ. ಫಸ್ಟ್ ಟೈಮ್ ಎಂಪಿ ತರ ನನ್ನ ರೆಕಾರ್ಡ್ ಇಲ್ಲ. ನನ್ನ ಬಗ್ಗೆ ಕಪ್ಪು ಚುಕ್ಕಿ ಇಲ್ಲ ಇದೆಲ್ಲ ಬಿಜೆಪಿಗೆ ಗೊತ್ತಿದೆ. ಇಂತ ವಾತಾವರಣದಲ್ಲಿ ಬಿಜೆಪಿ ಮಂಡ್ಯ ಸೀಟ್ ಉಳಿಸಿಕೊಳ್ಳುತ್ತೆ ಅನ್ನೋ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಭೇಟಿ ವಿಚಾರಕ್ಕೆ ಉತ್ತರಿಸಿದ ಸುಮಲತಾ ಅವರು, ಯಾರು ಯಾರನ್ನ ಬೇಕಾದರೂ ಭೇಟಿ ಅಗಲಿ ಅದು ಬೇರೆ ವಿಚಾರ, ನನ್ನ ಸ್ಪರ್ಧೆ ಬಗ್ಗೆ ಸಾಕಷ್ಟು ಊಹಾಪೋಹಗಳ ಇವೆ. ನಾನು ರಾಜಕೀಯಕ್ಕೆ ಬಂದಿರೋದೆ ಮಂಡ್ಯಕ್ಕಾಗಿ, ಮಂಡ್ಯದ ಜನ ಸಾಕಷ್ಟು ಪ್ರೀತಿ ಅಭಿಮಾನ ಸಿಕ್ಕಿದೆ. ಅದನ್ನ ಬಿಟ್ಟು ನಾನು ಬೇರೆ ಕಡೆ ಹೋಗಲ್ಲ. ಅದು ನನಗೆ ಅನಿವಾರ್ಯ ಅಲ್ಲ. ನಾನು ಬೇರೆ ಯಾವ ಕಡೆಗೂ ಹೋಗೋದಿಲ್ಲ. ಅಂಬರೀಶ್ ಹೋದಾಗ ನನಗೂ ಒಂದು ಜವಾಬ್ದಾರಿ ಕೊಟ್ಟು ಹೋಗಿದ್ದಾರೆ ಎಂದು ಸುಮಲತಾ ತಮ್ಮ ನಿಲುವನ್ನು ಸ್ಪಷ್ಟ ಪಡಿಸಿದ್ದಾರೆ.
ಇನ್ನು ಕಾಂಗ್ರೆಸ್ನಿಂದ ಟಿಕೆಟ್ ಆಫರ್ ಬಂದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಕಾಂಗ್ರೆಸ್ ಬಳಿ ಟಿಕೆಟ್ ಕೇಳಿಲ್ಲ ಎಂದು ವಿವರಿಸಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…