ರಾಜ್ಯ

ಮಂಗಳೂರು: ಮಳೆಗೆ ಮತ್ತೊಂದು ಬಲಿ: 2 ದಿನದಲ್ಲಿ 7 ದುರ್ಮರಣ

ಮಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಿದೆ. ಅದರಲ್ಲೂ ಕರಾವಳಿ ಭಾಗದಲ್ಲಂತೂ ಮಳೆಯ ತೀವ್ರತೆ ಹೆಚ್ಚಿದೆ. ಆಗಾಗಿ ಸಾವು-ನೋವುಗಳು ಸಂಭವಿಸುತ್ತಿವೆ.

ನಿನ್ನೆ ಬಿದ್ದ ಜೋರು ಮಳೆಗೆ ಮನೆ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿದ್ದರು. ಬಳಿಕ ಇಂದು ಬೆಳಿಗ್ಗೆ ಮಳೆಗೆ ಧರೆಗುರಿಳಿದ ವಿದ್ಯುತ್‌ ಸ್ಪರ್ಶಿಸಿ ಆಟೋ ಚಾಲಕರಿಬ್ಬರು ಸಾವನ್ನಪ್ಪಿದ್ದರು. ಇದೀಗ ಮನೆಯ ಬಳಿಯ ವಿದ್ಯುತ್‌ ಕಂಬದಿಂದ ವಿದ್ಯುತ್‌ ಹರಿದು ಯುವತಿ ಮೃತಪಟ್ಟಿದ್ದಾರೆ. ಒಟ್ಟಾರೆ ಜಿಲ್ಲೆಯಲ್ಲಿ ಮಳೆಯ ಅವಾಂತರಕ್ಕೆ 2 ದಿನಕ್ಕೆ 7 ಜನರು ದುರ್ಮರಣ ಹೊಂದಿದ್ದಾರೆ.

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಮೃತ ಯುವತಿ. ಆರ್ಡರ್‌ ಮಾಡಿದ್ದ ಮಾರ್ಸೆಲ್‌ ತೆಗೆದುಕೊಳ್ಳಲು ಮನೆಯಿಂದ ಹೊರಬಂದ ಯುವತಿ ಮಳೆ ನೀರಿನಲ್ಲಿ ವಿದ್ಯುತ್‌ ಪ್ರವಹಿಸಿದನ್ನು ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಉಪಚುನಾವಣೆ: ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ವರಿಷ್ಠರು

ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…

1 hour ago

‘ವಿದ್ಯಾರ್ಥಿ ಸ್ನೇಹಿ ಸಾರಿಗೆʼ

ಮಕ್ಕಳ ಸುರಕ್ಷತೆ ಮತ್ತು ಶಾಲಾ ಪ್ರಯಾಣ ಸುಗಮಗೊಳಿಸುವ ಉದ್ದೇಶ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ೧೨…

1 hour ago

ಫುಟ್‌ಪಾತ್ ಏರಿದ ವಾಹನಗಳು; ಜನರಿಗೆ ಗೋಳು

ಪ್ರಶಾಂತ್ ಎಸ್. ಮೈಸೂರು: ವಾಹನಗಳು ರಸ್ತೆಯಲ್ಲಿ ಸಂಚರಿಸಿದರೆ, ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಓಡಾಡ ಬೇಕು ಎನ್ನುವುದು ಸಾಮಾನ್ಯ ಸಂಗತಿ. ಆದರೆ, ಕುವೆಂಪುನಗರದ…

2 hours ago

ಶತಕದ ಗಡಿ ದಾಟಿದ ಬನ್ನಂಗಾಡಿ ಶಾಲೆ

ಎಸ್.ನಾಗಸುಂದರ್ ಪಾಂಡವಪುರ ಪಾಂಡವಪುರ: ದಾನಿಗಳ ನೆರವು, ಸ್ಥಳೀಯರ ಸಹಕಾರದಿಂದ ಆರಂಭಗೊಂಡ ಶಾಲೆಯು ನೂರು ವರ್ಷಗಳ ಗಡಿ ದಾಟಿ ಹೆಜ್ಜೆ ಮುಂದಿರಿಸಿದೆ.…

2 hours ago

ಕಾಡಿನಲ್ಲಿ ಶರಣ್ಯಳನ್ನು ಹುಡುಕಿದ್ದು ಯಾರು?

ಅಬ್ದುಲ್ ರಶೀದ್ ಕೊಡಗಿನ ಪರಿಶಿಷ್ಟ ಅಡಿಯ ಜನಾಂಗದ ಕೂಲಿ ಕಾರ್ಮಿಕ ಯುವಕರಾದ ಸುಬ್ರಮಣಿ, ರಾಜು, ಅಯ್ಯಪ್ಪ, ಮಣಿಕಂಠ, ಮಣಿ ಸಾಹಸಗಾಥೆ…

2 hours ago