ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದ ಮನೋಹರ ಪ್ರಸಾದ್ ಅವರು ಸುಮಾರು ನಾಲ್ಕು ದಶಕಗಳ ಕಾಲ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ತಮ್ಮದೇ ಆದ ಕೊಡುಗೆ ನೀಡಿದ್ದರು. ಇವರ ಅಗಲಿಕೆಗೆ ಪತ್ರಿಕಾ ರಂಗ ಕಂಬನಿ ಮಿಡಿದಿದೆ.
ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಪತ್ರಿಕೆಯಲ್ಲಿ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದ ಇವರು ಮುಖ್ಯ ವರದಿಗಾರರಾಗಿ, ಬ್ಯೂರೋ ಚೀಫ್, ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ಸುಮಾರು ನಾಲ್ಕು ದಶಕಗಳ ಕಾಲ ಪತ್ರಕಾ ರಂಗದಲ್ಲಿ ಸೇವೆ ಸಲ್ಲಿಸಿದ್ದ ಇವರು ಎರಡು ವರ್ಷಗಳ ಹಿಂದೆಯಷ್ಟೇ ನಿವೃತ್ತಿಗೊಂಡಿದ್ದರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…