ರಾಜ್ಯ

ಮಂಗಳೂರು: ತುಳು ವಿದ್ವಾಂಸ, ಸಾಹಿತಿ ಡಾ.ವಾಮನ ನಂದಾವರ ನಿಧನ

ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ (81) ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಮೂಲತಃ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ತುಳು ಜಾನಪದ ವಿದ್ವಾಂಸರಾಗಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ತಮ್ಮ ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು ಪ್ರೋತ್ಸಾಹಿಸಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು.

ಬಂಟ್ವಾಳ ತಾಲ್ಲೂಕಿನ ನಂದಾವರದ ಬಾಬು ಬಾಳೆಪುಣಿ, ಪೂವಮ್ಮರವರ ಪುತ್ರನಾಗಿ 1944ರ ನ.15ರಂದು ಜನಿಸಿದರು. ಇವರು ತಮ್ಮ ‘ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದರು.

ಅಧ್ಯಾಪಕರಾಗಿ, ಉಪನ್ಯಸಕರಾಗಿ, ಪ್ರಾಂಶುಪಾಲರಾಗಿ ಹೀಗೆ ಹಲವಾರು ವೃತ್ತಿಪರ ಹುದ್ದೆಗಳಲ್ಲಿ ಡಾ. ವಾಮನ ಸೇವೆ ಸಲ್ಲಿಸಿದ್ದು, ವಿಶ್ವ ತುಳು ಸಮ್ಮೇಳನದ ಸಂದರ್ಭದಲ್ಲಿಯೂ ದೊಡ್ಡಮಟ್ಟದ ಸೇವೆ ಸಲ್ಲಿಸಿದ್ದರು.

ಮಧ್ಯಾಹ್ನ 2 ಗಂಟೆಗೆ ಉರ್ವಸ್ಟೋರ್‌ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

2 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

2 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

3 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

3 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

3 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

3 hours ago