ರಾಜ್ಯ

ಮಂಗಳೂರು: ತುಳು ವಿದ್ವಾಂಸ, ಸಾಹಿತಿ ಡಾ.ವಾಮನ ನಂದಾವರ ನಿಧನ

ಮಂಗಳೂರು: ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಳು ಸಾರಸ್ವತ ಲೋಕದ ಹಿರಿಯ ವಿದ್ವಾಂಸ, ಸಾಹಿತಿ ಡಾ. ವಾಮನ ನಂದಾವರ (81) ಶನಿವಾರ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಮೂಲತಃ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ತುಳು ಜಾನಪದ ವಿದ್ವಾಂಸರಾಗಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ತಮ್ಮ ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು ಪ್ರೋತ್ಸಾಹಿಸಿ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದರು.

ಬಂಟ್ವಾಳ ತಾಲ್ಲೂಕಿನ ನಂದಾವರದ ಬಾಬು ಬಾಳೆಪುಣಿ, ಪೂವಮ್ಮರವರ ಪುತ್ರನಾಗಿ 1944ರ ನ.15ರಂದು ಜನಿಸಿದರು. ಇವರು ತಮ್ಮ ‘ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿದ್ದರು.

ಅಧ್ಯಾಪಕರಾಗಿ, ಉಪನ್ಯಸಕರಾಗಿ, ಪ್ರಾಂಶುಪಾಲರಾಗಿ ಹೀಗೆ ಹಲವಾರು ವೃತ್ತಿಪರ ಹುದ್ದೆಗಳಲ್ಲಿ ಡಾ. ವಾಮನ ಸೇವೆ ಸಲ್ಲಿಸಿದ್ದು, ವಿಶ್ವ ತುಳು ಸಮ್ಮೇಳನದ ಸಂದರ್ಭದಲ್ಲಿಯೂ ದೊಡ್ಡಮಟ್ಟದ ಸೇವೆ ಸಲ್ಲಿಸಿದ್ದರು.

ಮಧ್ಯಾಹ್ನ 2 ಗಂಟೆಗೆ ಉರ್ವಸ್ಟೋರ್‌ನಲ್ಲಿರುವ ತುಳು ಸಾಹಿತ್ಯ ಅಕಾಡೆಮಿಯ ತುಳು ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

10 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago