ರಾಜ್ಯ

ಮಂಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವ ವಕೀಲ

ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವ ವಕೀಲರೊಬ್ಬರು ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಬಿ.ಸಿ.ರೋಡು ಕೈಕುಂಜೆ ನಿವಾಸಿ ಪ್ರಥಮ್ ಬಂಗೇರ (27) ಸದಾ ಚಟುವಟಿಕೆಯುಳ್ಳ ಪ್ರಥಮ್‌, ಎಲ್.ಎಲ್.ಬಿ.ಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿ, ಬಂಟ್ವಾಳದ ಹಿರಿಯ ವಕೀಲರೊಬ್ಬರ ಬಳಿ ಪ್ರಾಕ್ಟೀಸ್ ಮಾಡುತ್ತಿದ್ದ. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಅಪಘಾತ ಆತನ ಪ್ರಾಣವನ್ನೇ ಕಸಿದಿತ್ತು.

ಕಳೆದ ವಾರ ಬಿ.ಸಿ.ರೋಡ್ ಮುಖ್ಯವೃತ್ತದ ಬಳಿ ಪ್ರಥಮ್ ಬೈಕ್‌ನಲ್ಲಿ ತೆರಳುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿಯಾಗಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಪ್ರಥಮ್ ಬಂಗೇರರ ಮೆದುಳು ರವಿವಾರ ರಾತ್ರಿ ನಿಷ್ಕ್ರಿಯಗೊಂಡಿದೆ. ವೈದ್ಯರು ಆತ ಇನ್ನು ಬದುಕುವುದಿಲ್ಲ ಎಂದು ಘೋಷಿಸಿದ್ದಾರೆ.

ಪ್ರಥಮ್ ತಂದೆ ವಾಮನ ಸಾಲ್ಯಾನ್ ಮತ್ತು ಸಹೋದರ ಆತನ ಎರಡು ಕಣ್ಣು, ಎರಡು ಕಿಡ್ನಿ, ಲಿವರ್, ಕರುಳಿನ ಭಾಗವನ್ನು ಇನ್ಯಾರದ್ದೋ ಬದುಕಿಗೆ ಬೆಳಕಾಗುವಂತೆ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಈ ಮೂಲಕ ಪ್ರಥಮ್ ಬಂಗೇರ ಸಾವಿನ ಬಳಿಕವೂ ಅಮರನಾಗಿದ್ದಾರೆ. ಕಳೆದ ನವೆಂಬರ್‌ನಲ್ಲಿ ಪ್ರಥಮ್ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

3 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

4 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

4 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

6 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

6 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

6 hours ago