ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವ ವಕೀಲರೊಬ್ಬರು ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಬಿ.ಸಿ.ರೋಡು ಕೈಕುಂಜೆ ನಿವಾಸಿ ಪ್ರಥಮ್ ಬಂಗೇರ (27) ಸದಾ ಚಟುವಟಿಕೆಯುಳ್ಳ ಪ್ರಥಮ್, ಎಲ್.ಎಲ್.ಬಿ.ಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿ, ಬಂಟ್ವಾಳದ ಹಿರಿಯ ವಕೀಲರೊಬ್ಬರ ಬಳಿ ಪ್ರಾಕ್ಟೀಸ್ ಮಾಡುತ್ತಿದ್ದ. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಅಪಘಾತ ಆತನ ಪ್ರಾಣವನ್ನೇ ಕಸಿದಿತ್ತು.
ಕಳೆದ ವಾರ ಬಿ.ಸಿ.ರೋಡ್ ಮುಖ್ಯವೃತ್ತದ ಬಳಿ ಪ್ರಥಮ್ ಬೈಕ್ನಲ್ಲಿ ತೆರಳುತ್ತಿದ್ದಾಗ ಡಿವೈಡರ್ಗೆ ಡಿಕ್ಕಿಯಾಗಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಪ್ರಥಮ್ ಬಂಗೇರರ ಮೆದುಳು ರವಿವಾರ ರಾತ್ರಿ ನಿಷ್ಕ್ರಿಯಗೊಂಡಿದೆ. ವೈದ್ಯರು ಆತ ಇನ್ನು ಬದುಕುವುದಿಲ್ಲ ಎಂದು ಘೋಷಿಸಿದ್ದಾರೆ.
ಪ್ರಥಮ್ ತಂದೆ ವಾಮನ ಸಾಲ್ಯಾನ್ ಮತ್ತು ಸಹೋದರ ಆತನ ಎರಡು ಕಣ್ಣು, ಎರಡು ಕಿಡ್ನಿ, ಲಿವರ್, ಕರುಳಿನ ಭಾಗವನ್ನು ಇನ್ಯಾರದ್ದೋ ಬದುಕಿಗೆ ಬೆಳಕಾಗುವಂತೆ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಈ ಮೂಲಕ ಪ್ರಥಮ್ ಬಂಗೇರ ಸಾವಿನ ಬಳಿಕವೂ ಅಮರನಾಗಿದ್ದಾರೆ. ಕಳೆದ ನವೆಂಬರ್ನಲ್ಲಿ ಪ್ರಥಮ್ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…