ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವ ವಕೀಲರೊಬ್ಬರು ಅಂಗಾಂಗ ದಾನದ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಬಿ.ಸಿ.ರೋಡು ಕೈಕುಂಜೆ ನಿವಾಸಿ ಪ್ರಥಮ್ ಬಂಗೇರ (27) ಸದಾ ಚಟುವಟಿಕೆಯುಳ್ಳ ಪ್ರಥಮ್, ಎಲ್.ಎಲ್.ಬಿ.ಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾಗಿ, ಬಂಟ್ವಾಳದ ಹಿರಿಯ ವಕೀಲರೊಬ್ಬರ ಬಳಿ ಪ್ರಾಕ್ಟೀಸ್ ಮಾಡುತ್ತಿದ್ದ. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಅಪಘಾತ ಆತನ ಪ್ರಾಣವನ್ನೇ ಕಸಿದಿತ್ತು.
ಕಳೆದ ವಾರ ಬಿ.ಸಿ.ರೋಡ್ ಮುಖ್ಯವೃತ್ತದ ಬಳಿ ಪ್ರಥಮ್ ಬೈಕ್ನಲ್ಲಿ ತೆರಳುತ್ತಿದ್ದಾಗ ಡಿವೈಡರ್ಗೆ ಡಿಕ್ಕಿಯಾಗಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಪ್ರಥಮ್ ಬಂಗೇರರ ಮೆದುಳು ರವಿವಾರ ರಾತ್ರಿ ನಿಷ್ಕ್ರಿಯಗೊಂಡಿದೆ. ವೈದ್ಯರು ಆತ ಇನ್ನು ಬದುಕುವುದಿಲ್ಲ ಎಂದು ಘೋಷಿಸಿದ್ದಾರೆ.
ಪ್ರಥಮ್ ತಂದೆ ವಾಮನ ಸಾಲ್ಯಾನ್ ಮತ್ತು ಸಹೋದರ ಆತನ ಎರಡು ಕಣ್ಣು, ಎರಡು ಕಿಡ್ನಿ, ಲಿವರ್, ಕರುಳಿನ ಭಾಗವನ್ನು ಇನ್ಯಾರದ್ದೋ ಬದುಕಿಗೆ ಬೆಳಕಾಗುವಂತೆ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಈ ಮೂಲಕ ಪ್ರಥಮ್ ಬಂಗೇರ ಸಾವಿನ ಬಳಿಕವೂ ಅಮರನಾಗಿದ್ದಾರೆ. ಕಳೆದ ನವೆಂಬರ್ನಲ್ಲಿ ಪ್ರಥಮ್ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…