ರಾಜ್ಯ

ಮಂಗಳೂರು | ಬಹುಕೋಟಿ ಮೌಲ್ಯದ ಎಂಡಿಎಂಎ ವಶ ; ಇಬ್ಬರು ವಿದೇಶಿ ಮಹಿಳೆಯರ ಬಂಧನ

ಮಂಗಳೂರು : ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವನ್ನು ಭೇದಿಸಿರುವ ಇಲ್ಲಿನ ಸಿಸಿಬಿ ಪೊಲೀಸರು, ಪ್ರಕರಣದಲ್ಲಿ ಆಫ್ರಿಕಾ ಮೂಲದ ಇಬ್ಬರು ಮಹಿಳೆಯನ್ನು ಬಂಧಿಸಿದ್ದಾರೆ. ಅವರಿಂದ 37.5 ಕೆಜಿ ತೂಕದ ಎಂಡಿಎಂಎ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಇದರ ಮೌಲ್ಯ 74 ಕೋಟಿ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.

ಪ್ರಕರಣ ಸಂಬಂಧ ದಕ್ಷಿಣ ಆಫ್ರಿಕಾ ಮೂಲದ ಬಂಬಾ ಫಾಂಟಾ(31) ಹಾಗೂ ಅಬಿಗೈಲ್ ಅಡೋನಿಸ್ (30)ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದ್ದು, ಕಳೆದ 6 ತಿಂಗಳಿಂದ ಈ ಬೃಹತ್ ಕಾರ್ಯಾಚರಣೆ ನಡೆದಿದೆ. ರಾಜ್ಯದ ಅತ್ಯಂತ ದೊಡ್ಡ ಡ್ರಗ್ಸ್ ಇದಾಗಿದೆ. ಈಗಾಗಲೇ ಡ್ರಗ್ಸ್ ಮಾಫಿಯಾದ ಕಿಂಗ್ ಪಿನ್ ಅಬ್ದುಲ್ ಫೈಸಲ್‍ನನ್ನು ಬಂಧಿಸಲಾಗಿದ್ದು ಆತನಿಂದ ಪೊಲೀಸರು ಸಜೀವ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಎಂಡಿಎಂಎ ವಶಪಡಿಸಿಕೊಂಡಿದ್ದ ಇದೇ ಮೊದಲು ಎಂದು ಭಾನುವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನವ ಮಂಗಳೂರು ಸಿಸಿಬಿ ಪೊಲೀಸರು ದೊಡ್ಡ ಕಾರ್ಯಾಚರಣೆ ನಡೆಸಿದ್ದಾರೆ. ರಾಜ್ಯದ ಇತಿಹಾಸದಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಡಿದ್ದೇವೆ. 6 ತಿಂಗಳ ಹಿಂದೆ ಮಂಗಳೂರಿನ ಪಂಪ್ ವೆಲ್ ಬಳಿ ಹೈದರ್ ಎಂಬವನನ್ನು ಬಂದಿಸಿದ್ದೆವು. ಆತನಿಂದ 15 ಗ್ರಾಂ ಡ್ರಗ್ ವಶಪಡಿಸಿದ್ದೆವು. ಆತನಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದವರ ಬಂಧನಕ್ಕೆ ಸಿಸಿಬಿ ಪೊಲೀಸರು ಆರು ತಿಂಗಳಿನಿಂದ ಕಾರ್ಯಾಚರಣೆ ಮಾಡುತ್ತಿದ್ದರು. ಈ ನಡುವೆ ಬೆಂಗಳೂರಿನಲ್ಲಿ ನೆಲೆಸಿದ್ದ ನೈಜೀರಿಯಾ ಪ್ರಜೆ ಪೀಟರ್‍ನನ್ನು ಬಂಧಿಸಿದ್ದೆವು. ಆತನಿಂದ 6 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದೆವು. ಆತನ ವಿಚಾರಣೆ ನಂತರ ಮತ್ತೆ ಕಾರ್ಯಾಚರಣೆ ಮಾಡಿ ಈ ಇಬ್ಬರು ಮಹಿಳೆಯರನ್ನು ಬಂಧಿಸಿದ್ದೇವೆ.

ದೆಹಲಿಯಿಂದ ಬೆಂಗಳೂರಿಗೆ ವಿಮಾನ ಮೂಲಕ ಬಂದಿದ್ದರು. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ಇಬ್ಬರನ್ನೂ ಬಂಧಿಸಿದ್ದೇವೆ ಎಂದು ಆಯುಕ್ತರು ತಿಳಿಸಿದ್ದಾರೆ.

ಅವರಿಂದ 75 ಕೋಟಿ ಮೌಲ್ಯದ 37.878 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದೇವೆ. 4 ಮೊಬೈಲ್ ಫೋನ್, 2 ಪಾಸ್ ಪೋರ್ಟ್, ಟ್ರಾಲಿ ಬ್ಯಾಗ್ , 18,460 ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಜಾಲಕ್ಕೆ ವಿಮಾನ ನಿಲ್ದಾಣ ಅಧಿಕಾರಿಗಳು ಕೂಡ ಶಾಮೀಲಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

56 mins ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

1 hour ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

1 hour ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

2 hours ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

2 hours ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

2 hours ago