ರಾಜ್ಯ

ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಕೇಂದ್ರದ ಸಮ್ಮತಿ

ಬೆಂಗಳೂರು : ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ.ಗಳಂತೆ ಒಟ್ಟು‌ 4 ರೂ ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ.

ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವರಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.

2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.

2.5 ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋಮವಾರ ಈ‌ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ.

ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ,ಕೃಷಿ , ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು.

ಮಾವು ರಾಜ್ಯದ ಪ್ರಮುಖ ಬೆಳೆ: 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.

ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.

ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.

ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು. ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂಗೆ ಕುಸಿದಿದೆ. ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ.

ಈ ನಿಟ್ಟಿನಲ್ಲಿ 11.06.2025 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು ಮತ್ತು 13.06.2025 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು. ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಿಳೆ ಮೇಲೆ ಹಲ್ಲೆ, ದೌರ್ಜನ್ಯ : ಆರೋಪಿ ಬಂಧನಕ್ಕೆ ದಸಂಸ ಆಗ್ರಹ

ಮಂಡ್ಯ : ತಾಲ್ಲೂಕಿನ ಕಚ್ಚಿಗೆರೆ ಗ್ರಾಮದ ದಲಿತ ಮಹಿಳೆ ರಜನಿ ಎಂಬವರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿರುವ ಆರೋಪಿಗಳನ್ನು…

4 mins ago

ಉತ್ತಮ ಕೃಷಿಗೆ ಜೈವಿಕ ಗೊಬ್ಬರ ಬಳಸಿ : ತೋಟಗಾರಿಕೆ ವಿ.ವಿ ಕುಲಪತಿ ವಿಷ್ಣವರ್ಧನ ಸಲಹೆ

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ…

10 mins ago

ರಂಗಭೂಮಿ ಧರ್ಮಾತೀತ,ಜಾತ್ಯತೀತವಾದದ್ದು : ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣನೆ

ಮೈಸೂರು : ರಂಗಭೂಮಿ ಎಂಬುದು ಧರ್ಮಾತೀತ, ಜಾತ್ಯತೀತ ಅಲ್ಲದೇ ದೇಶಾತೀತ ಎಂದು ಹಿರಿಯ ರಂಗಕರ್ಮಿ ಸಿ.ಬಸವಲಿಂಗಯ್ಯ ಬಣ್ಣಿಸಿದರು. ನಗರದ ಜೆಎಲ್‌ಬಿ…

40 mins ago

ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ : ರಘುನಾಥ್‌ ಚ.ಹ, ಪ್ರಕಾಶ್‌ರಾಜ್‌ ಕೃತಿ ಆಯ್ಕೆ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ…

2 hours ago

ಕೊಲೆ ಪ್ರಕರಣ | ಪವಿತ್ರಾ ಗೌಡಗೆ ಕೊನೆಗೂ ಸಿಕ್ತು ಗುಡ್‌ ನ್ಯೂಸ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ…

2 hours ago

ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ : ತಂದೆ ನೆನೆದು ಸಚಿವ ಖಂಡ್ರೆ ಭಾವುಕ

ಬೀದರ್:‌ ನಮ್ಮ ತಂದೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ…

3 hours ago