ರಾಜ್ಯ

ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಕೇಂದ್ರದ ಸಮ್ಮತಿ

ಬೆಂಗಳೂರು : ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ.ಗಳಂತೆ ಒಟ್ಟು‌ 4 ರೂ ವ್ಯತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ.

ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ ಕೇಂದ್ರ ಕೃಷಿ ಸಚಿವರಾ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮಾವು ಬೆಳೆಗಾರರ ಪರಿಸ್ಥಿತಿ ಮನವರಿಕೆ ಮಾಡಿಕೊಟ್ಟರು.

2025-26ನೇ ಸಾಲಿನ ಮಾರುಕಟ್ಟೆ ಋತುವಿನಲ್ಲಿ ಮಾವಿಗೆ PDPS ಯೋಜನೆಯ ಅನುಷ್ಠಾನಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಮಾಡಿದ ಮನವಿಗೆ ಕೇಂದ್ರ ಕೃಷಿ ಸಚಿವರೂ ಸಹ ಸಮ್ಮತಿ ನೀಡಿದರು.

2.5 ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸೋಮವಾರ ಈ‌ ಬಗ್ಗೆ ಅಧಿಕೃತ ಆದೇಶ ಹೊರಬೀಳುವ ನಿರೀಕ್ಷೆ ‌ಇದೆ.

ಈ‌ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ,ಕೃಷಿ , ತೋಟಗಾರಿಕೆ ಇಲಾಖೆ‌ ಅಧಿಕಾರಿಗಳು ಹಾಜರಿದ್ದರು.

ಮಾವು ರಾಜ್ಯದ ಪ್ರಮುಖ ಬೆಳೆ: 2025-26ನೇ ಋತುವಿನಲ್ಲಿ 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ. ಈ ಬಾರಿ ಅಂದಾಜು 08 ರಿಂದ 10 ಲಕ್ಷ ಟನ್ ಮಾವು ಉತ್ಪಾದನೆಯಾಗಿದೆ.

ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರಮುಖ ಮಾವು ಬೆಳೆ ಪ್ರದೇಶಗಳಾಗಿವೆ.

ಕರ್ನಾಟಕದಲ್ಲಿ, ಮಾವಿನ ಕೊಯ್ಲು ಮೇ ನಿಂದ ಜುಲೈ ವರೆಗೆ ನಡೆಯುತ್ತದೆ. ಈ ಅವಧಿಯಲ್ಲಿ, ಮಾರುಕಟ್ಟೆ ಬೆಲೆಗಳಲ್ಲಿ ಗಮನಾರ್ಹ ಏರಿಳಿತಗಳನ್ನು ಗಮನಿಸಲಾಗಿದೆ.

ಮೇ 2025 ರಲ್ಲಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವಿನ ಹಣ್ಣಿನ ಮಾದರಿ ಬೆಲೆಗಳು ಕ್ವಿಂಟಾಲ್‌ಗೆ ರೂ.1,200 ರಿಂದ ರೂ.2,500 ರವರೆಗೆ ಇತ್ತು. ಶ್ರೀನಿವಾಸಪುರ ಮಾರುಕಟ್ಟೆಯಲ್ಲಿ ತೋತಾಪುರಿ ವರಿಟೆಯ ಚಾಲ್ತಿಯಲ್ಲಿರುವ ಮಾರುಕಟ್ಟೆ ಬೆಲೆಗಳು ಪ್ರತಿ ಕ್ವಿಂಟಾಲ್‌ಗೆ 450-550 ರೂಗೆ ಕುಸಿದಿದೆ. ಕರ್ನಾಟಕ ಕೃಷಿ ಬೆಲೆ ಆಯೋಗವು ಮಾವಿನ A1 + FL ಕೃಷಿ ವೆಚ್ಚವನ್ನು ಕ್ವಿಂಟಲ್‌ಗೆ 3,460 ರೂ. ಮತ್ತು C-3 ವೆಚ್ಚಕ್ಕೆ 5,466 ರೂ. ಎಂದು ಶಿಫಾರಸು ಮಾಡಿದೆ.

ಈ ನಿಟ್ಟಿನಲ್ಲಿ 11.06.2025 ರಂದು ಭಾರತ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು ಮತ್ತು 13.06.2025 ರಂದು ಸ್ಪಷ್ಟೀಕರಣಗಳಿಗೆ ಉತ್ತರವನ್ನು ನೀಡಲಾಯಿತು. ತೋಟಗಾರಿಕೆ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕ ಮಾವು ಅಭಿವೃದ್ಧಿ ಮಂಡಳಿಯನ್ನು PDPS ಅನುಷ್ಠಾನಕ್ಕಾಗಿ ರಾಜ್ಯ ಮಟ್ಟದ ಸಂಸ್ಥೆಯಾಗಿ ಗೊತ್ತುಪಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

45 seconds ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

20 mins ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

3 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

3 hours ago

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

3 hours ago

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್‌ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…

4 hours ago