ರಾಜ್ಯ

ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು.

ಆರ್ ಬಿಐ ಗೌರ್ನರ್ ಆಗಿ, ವಿಶ್ವಬ್ಯಾಂಕಿನ ಭಾರತದ ಪ್ರತಿನಿಧಿಯಾಗಿ ಭಾರತ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅವರು ಸಂಪೂರ್ಣ ಜೀವನ ಮೀಸಲಿಟ್ಟಿದ್ದರು. ಅದರ ಪರಿಣಾಮ ಭಾರತ ಸಧೃಡ ಆರ್ಥಿಕ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಇದರ ಜೊತೆಗೆ ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರವಾದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ. ನಾವು ಯಾವಾಗಲೂ ಭೇಟಿ ಆದಾಗ ಹುಬ್ಬಳಿಯ ಬಗ್ಗೆ ಕೇಳುತ್ತಿದ್ದರು. ಬಹಳ ಕಾಳಜಿ ವಹಿಸುತ್ತಿದ್ದರು.

ಬೆಂಗಳೂರಿನ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ಇದ್ದ ಮನಮೋಹನ್ ಸಿಂಗ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಸುಮಾರು 5 ಸಾವಿರ ಕೋಟಿ ರೂ. ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಬಹಳ ಇದೆ. ಅವರ ಅಗಲಿಕೆಯಿಂದ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ತಿಳಿಸಿದರು.

andolana

Recent Posts

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

31 seconds ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

6 mins ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

29 mins ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

38 mins ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

48 mins ago

ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದ ಸಿದ್ದರಾಮಯ್ಯ

ಬೆಂಗಳೂರು: ದಾಖಲೆಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…

1 hour ago