ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು.
ಆರ್ ಬಿಐ ಗೌರ್ನರ್ ಆಗಿ, ವಿಶ್ವಬ್ಯಾಂಕಿನ ಭಾರತದ ಪ್ರತಿನಿಧಿಯಾಗಿ ಭಾರತ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅವರು ಸಂಪೂರ್ಣ ಜೀವನ ಮೀಸಲಿಟ್ಟಿದ್ದರು. ಅದರ ಪರಿಣಾಮ ಭಾರತ ಸಧೃಡ ಆರ್ಥಿಕ ಸ್ಥಿತಿಯಲ್ಲಿದೆ ಎಂದು ಹೇಳಿದರು.
ಇದರ ಜೊತೆಗೆ ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರವಾದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ. ನಾವು ಯಾವಾಗಲೂ ಭೇಟಿ ಆದಾಗ ಹುಬ್ಬಳಿಯ ಬಗ್ಗೆ ಕೇಳುತ್ತಿದ್ದರು. ಬಹಳ ಕಾಳಜಿ ವಹಿಸುತ್ತಿದ್ದರು.
ಬೆಂಗಳೂರಿನ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ಇದ್ದ ಮನಮೋಹನ್ ಸಿಂಗ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಸುಮಾರು 5 ಸಾವಿರ ಕೋಟಿ ರೂ. ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಬಹಳ ಇದೆ. ಅವರ ಅಗಲಿಕೆಯಿಂದ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ತಿಳಿಸಿದರು.
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…