ರಾಜ್ಯ

ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು.

ಆರ್ ಬಿಐ ಗೌರ್ನರ್ ಆಗಿ, ವಿಶ್ವಬ್ಯಾಂಕಿನ ಭಾರತದ ಪ್ರತಿನಿಧಿಯಾಗಿ ಭಾರತ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅವರು ಸಂಪೂರ್ಣ ಜೀವನ ಮೀಸಲಿಟ್ಟಿದ್ದರು. ಅದರ ಪರಿಣಾಮ ಭಾರತ ಸಧೃಡ ಆರ್ಥಿಕ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಇದರ ಜೊತೆಗೆ ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರವಾದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ. ನಾವು ಯಾವಾಗಲೂ ಭೇಟಿ ಆದಾಗ ಹುಬ್ಬಳಿಯ ಬಗ್ಗೆ ಕೇಳುತ್ತಿದ್ದರು. ಬಹಳ ಕಾಳಜಿ ವಹಿಸುತ್ತಿದ್ದರು.

ಬೆಂಗಳೂರಿನ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ಇದ್ದ ಮನಮೋಹನ್ ಸಿಂಗ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಸುಮಾರು 5 ಸಾವಿರ ಕೋಟಿ ರೂ. ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಬಹಳ ಇದೆ. ಅವರ ಅಗಲಿಕೆಯಿಂದ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ತಿಳಿಸಿದರು.

andolana

Recent Posts

ಚಾ.ಬೆಟ್ಟದ ತಪ್ಪಲಿನಲ್ಲಿ ಬೆಂಕಿ : ಕಿಡಿಗೇಡಿಗಳ ಕೃತ್ಯಕ್ಕೆ ಸಸ್ಯ ಸಂಕುಲ ಹಾನಿ

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…

20 mins ago

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…

56 mins ago

ಆವಿಷ್ಕಾರ,ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ : ಎನ್.ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…

2 hours ago

ಬಜೆಟ್ ಘೋಷಣೆಯಂತೆ ಚಾಲುಕ್ಯ ಉತ್ಸವದ ಆಯೋಜನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…

2 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ಅವಿರೋಧ ಆಯ್ಕೆ

ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…

3 hours ago

ವಿಡಿಯೋ ವೈರಲ್‌ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್‌ ಅಜ್ಞಾತ ಸ್ಥಳಕ್ಕೆ

ಬೆಂಗಳೂರು : ಡಿಜಿಪಿ ರಾಮಚಂದ್ರರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್‌ ಅವರು ಹತ್ತು…

3 hours ago