ರಾಜ್ಯ

ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು.

ಆರ್ ಬಿಐ ಗೌರ್ನರ್ ಆಗಿ, ವಿಶ್ವಬ್ಯಾಂಕಿನ ಭಾರತದ ಪ್ರತಿನಿಧಿಯಾಗಿ ಭಾರತ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅವರು ಸಂಪೂರ್ಣ ಜೀವನ ಮೀಸಲಿಟ್ಟಿದ್ದರು. ಅದರ ಪರಿಣಾಮ ಭಾರತ ಸಧೃಡ ಆರ್ಥಿಕ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಇದರ ಜೊತೆಗೆ ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರವಾದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ. ನಾವು ಯಾವಾಗಲೂ ಭೇಟಿ ಆದಾಗ ಹುಬ್ಬಳಿಯ ಬಗ್ಗೆ ಕೇಳುತ್ತಿದ್ದರು. ಬಹಳ ಕಾಳಜಿ ವಹಿಸುತ್ತಿದ್ದರು.

ಬೆಂಗಳೂರಿನ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ಇದ್ದ ಮನಮೋಹನ್ ಸಿಂಗ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಸುಮಾರು 5 ಸಾವಿರ ಕೋಟಿ ರೂ. ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಬಹಳ ಇದೆ. ಅವರ ಅಗಲಿಕೆಯಿಂದ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ತಿಳಿಸಿದರು.

andolana

Recent Posts

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

1 hour ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

1 hour ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

2 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

2 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

2 hours ago

ಟಿ.20 ವಿಶ್ವಕಪ್‌ | ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ; 82.1 ಕೋಟಿ ಮಂದಿ ವೀಕ್ಷಣೆ

ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…

2 hours ago