ರಾಜ್ಯ

ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು.

ಆರ್ ಬಿಐ ಗೌರ್ನರ್ ಆಗಿ, ವಿಶ್ವಬ್ಯಾಂಕಿನ ಭಾರತದ ಪ್ರತಿನಿಧಿಯಾಗಿ ಭಾರತ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅವರು ಸಂಪೂರ್ಣ ಜೀವನ ಮೀಸಲಿಟ್ಟಿದ್ದರು. ಅದರ ಪರಿಣಾಮ ಭಾರತ ಸಧೃಡ ಆರ್ಥಿಕ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಇದರ ಜೊತೆಗೆ ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರವಾದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ. ನಾವು ಯಾವಾಗಲೂ ಭೇಟಿ ಆದಾಗ ಹುಬ್ಬಳಿಯ ಬಗ್ಗೆ ಕೇಳುತ್ತಿದ್ದರು. ಬಹಳ ಕಾಳಜಿ ವಹಿಸುತ್ತಿದ್ದರು.

ಬೆಂಗಳೂರಿನ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ಇದ್ದ ಮನಮೋಹನ್ ಸಿಂಗ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಸುಮಾರು 5 ಸಾವಿರ ಕೋಟಿ ರೂ. ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಬಹಳ ಇದೆ. ಅವರ ಅಗಲಿಕೆಯಿಂದ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ತಿಳಿಸಿದರು.

andolana

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

7 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

9 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

11 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

11 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

17 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

17 hours ago