ರಾಜ್ಯ

ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ: ಬಸವರಾಜ ಬೊಮ್ಮಾಯಿ

ಗದಗ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗದಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಪರೂಪದ ರಾಜಕಾರಣಿ, ದೂರದೃಷ್ಟಿ ಉಳ್ಳ ಪ್ರಧಾನಿಯಾಗಿದ್ದರು. ದೇಶವನ್ನು ಆರ್ಥಿಕ ಸಂಕಷ್ಟದಿಂದ ದೂರ ಮಾಡಿದವರು.

ಆರ್ ಬಿಐ ಗೌರ್ನರ್ ಆಗಿ, ವಿಶ್ವಬ್ಯಾಂಕಿನ ಭಾರತದ ಪ್ರತಿನಿಧಿಯಾಗಿ ಭಾರತ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಅವರು ಸಂಪೂರ್ಣ ಜೀವನ ಮೀಸಲಿಟ್ಟಿದ್ದರು. ಅದರ ಪರಿಣಾಮ ಭಾರತ ಸಧೃಡ ಆರ್ಥಿಕ ಸ್ಥಿತಿಯಲ್ಲಿದೆ ಎಂದು ಹೇಳಿದರು.

ಇದರ ಜೊತೆಗೆ ಮನಮೋಹನ್ ಸಿಂಗ್ ಅವರಿಗೆ ಹುಬ್ಬಳ್ಳಿಯೊಂದಿಗೆ ಹತ್ತಿರವಾದ ನಂಟಿದೆ. ಅವರ ಕೊ ಬ್ರದರ್ ಹಾಗೂ ಅವರ ಪತ್ನಿಯ ಸಹೋದರಿ ಹುಬ್ಬಳ್ಳಿಯಲ್ಲಿ ಇರುವುದು ವಿಶೇಷ. ನಾವು ಯಾವಾಗಲೂ ಭೇಟಿ ಆದಾಗ ಹುಬ್ಬಳಿಯ ಬಗ್ಗೆ ಕೇಳುತ್ತಿದ್ದರು. ಬಹಳ ಕಾಳಜಿ ವಹಿಸುತ್ತಿದ್ದರು.

ಬೆಂಗಳೂರಿನ ಅಭಿವೃದ್ಧಿಯ ಬಗ್ಗೆಯೂ ಕಾಳಜಿ ಇದ್ದ ಮನಮೋಹನ್ ಸಿಂಗ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಸುಮಾರು 5 ಸಾವಿರ ಕೋಟಿ ರೂ. ನೀಡಿದ್ದಾರೆ. ದೇಶದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಬಹಳ ಇದೆ. ಅವರ ಅಗಲಿಕೆಯಿಂದ ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ತಿಳಿಸಿದರು.

andolana

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

2 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

15 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

15 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

16 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

16 hours ago