ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ನಾಳೆಯಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ತಯಾರಾಗಿವೆ.
ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸದನದ ಹೊರಗೆ ಒಂದಾಗಿ ಹೋರಾಟ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಸದನದ ಒಳಗೂ ಸಹ ಸರ್ಕಾರದ ವಿರುದ್ಧ ಒಂದಾಗಲಿವೆ.
ಲೋಕಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಬಿಜೆಪಿಯ ಬಸವರಾಜ ಬೊಮ್ಮಾಯಿ, ಜೆಡಿಎಸ್ನ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ನ ಇ ತುಕಾರಾಂ, ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ಶಾಸಕ ಮತ್ತು ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆದ್ದರಿಂದ ಅವರುಗಳಿಲ್ಲದೇ ಮೊದಲ ಅಧಿವೇಶನ ನಡೆಯುತ್ತಿದೆ.
ವಿಧಾನಸಭೆ ಪ್ರತಿಪಕ್ಷದ ಸಾಲಿನಿಂದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ನಿರ್ಗಮಿಸಿದ್ದಾರೆ. ಆದ್ದರಿಂದ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.
ಇನ್ನೂ ಮುಂಗಾರು ಅಧಿವೇಶನ ಕಾವೇರುವ ಎಲ್ಲಾ ಸೂಚನೆ ಸಿಕ್ಕಿದ್ದು, ಪ್ರತಿಪಕ್ಷಗಳ ಕೈಯಲ್ಲಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಅನೇಕ ಅಸ್ತ್ರಗಳಿವೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಭಾರೀ ಮುಜುಗರ ಅನುಭವಿಸಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷಗಳು ಟಾರ್ಗೆಟ್ ಮಾಡುತ್ತಿವೆ. ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಅವರು ಇಡಿಯಿಂದ ಬಂಧನಕ್ಕೆ ಒಳಗಾಗಿದ್ದು, ಕಾಂಗ್ರೆಸ್ಗೆ ಸಂಕಷ್ಟ ತಂದಿದೆ.
ಇದಲ್ಲದೇ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಕೆ.ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿ ಶಿಫಾರಸು ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿರುವುದು ಮುಂತಾದ ವಿಚಾರಗಳು ಸದನದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗುವ ನಿರೀಕ್ಷೆಯಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…