ಆಂಧ್ರಪ್ರದೇಶ: ಮಂತ್ರಾಲಯದಲ್ಲಿ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸದ ಅಂಗವಾಗಿ ಮಹಾರಥೋತ್ಸವ ಅದ್ಧೂರಿಯಾಗಿ ನಡೆಯಿತು. ಮಹಾರಥೋತ್ಸವಕ್ಕೆ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಚಾಲನೆ ನೀಡಿದರು.
ಉತ್ತರಾಧನೆಯ ಮಹಾರಥೋತ್ಸವದ ವೈಭವಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ರಾಯರ ದರ್ಶನ ಪಡೆದರು. ಗುರು ಸಾರ್ವಭೌಮರು ವೃಂದಾವನಸ್ಥರಾದ ಮರುದಿನವನ್ನು ಮಂತ್ರಾಲಯದಲ್ಲಿ ಉತ್ತರಾಧನೆಯಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಉತ್ತರಾಧನೆಯ ಹಿನ್ನೆಲೆಯಲ್ಲಿ ಮಠದ ರಾಜಬೀದಿಯಲ್ಲಿ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.
ಈ ಬಾರಿಯ ಉತ್ತರಾಧನೆಯಲ್ಲಿ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗವಹಿಸಿದ್ದರು. ಯದುವೀರ್ ಒಡೆಯರ್ ಅವರಿಗೆ ಮಠದಿಂದ ರಾಘವೇಂದ್ರ ಅನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಸರ, ನಗದು ಜೊತೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಯದುವೀರ್ ಒಡೆಯರ್ ಅವರು, ಮೈಸೂರು ದಸರಾದಷ್ಟೇ ವಿಜೃಂಭಣೆಯಿಂದ ರಾಯರ ಆರಾಧನೆ ನಡೆಯುತ್ತಿದೆ. ಗುರುಗಳು ತೋರಿಸಿಕೊಟ್ಟ ಸನ್ಮಾರ್ಗದಲ್ಲಿ ಎಲ್ಲರೂ ನಡೆಯೋಣ ಎಂದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…