ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು.
ಇಂದು ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗುತ್ತಿದೆ.
ಈ ವೇಳೆ ಸಿಎಂ ಸಿದ್ಧರಾಮಯ್ಯ ಪರವಾಗಿ ವಾದ ಆರಂಭಿಸಿದಂತ ಹಿರಿಯ ವಕೀಲ ಮನು ಸಿಂಘ್ವಿ ಅವರು, ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶವನ್ನು ನೀಡುವಂತಿಲ್ಲ ಎಂಬುದಾಗಿ ಹೇಳಿದರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತ ಮಧ್ಯಪ್ರದೇಶದ ತೀರ್ಪುಗಳನ್ನು ಉಲ್ಲೇಖಿಸಿದರು.
ರಾಜ್ಯಪಾಲರಿಗೆ ಸಲಹೆ ನೀಡುವ ಸಂಬಂಧದ ಕ್ಯಾಬಿನೆಟ್ ಸಭೆಯಲ್ಲೂ ಸಿದ್ಧರಾಮಯ್ಯ ಭಾಗಿಯಾಗಿಲ್ಲ. ರಾಜ್ಯ ಸಚಿವ ಸಂಪುಟ ಸಭೆಯಿಂದ ಹೊರಗೆ ಉಳಿದಿದ್ದಾರೆ. ಇಂತಹ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆ ಮಾಡಿದ್ದಾರೆ. ಹೀಗಿದ್ದರೂ ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದರು.
ಇನ್ನೂ ರಾಜ್ಯಪಾಲರಿಗೆ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಸಂಬಂಧ ದೂರು ನೀಡಿದಂತ ಕೆಲವೇ ಕ್ಷಣಗಳಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂಬುದಾಗಿಯೂ ಹೈಕೋರ್ಟ್ ಗಮನಕ್ಕೆ ಸಿಎಂ ಸಿದ್ಧರಾಮಯ್ಯ ಪರ ಹಿರಿಯ ವಕೀಲ ಮನು ಸಿಂಘ್ವಿ ತಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…