ರಾಜ್ಯ

ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶ: ಸಿಎಂ ಪರ ಮನು ಸಿಂಘ್ವಿ ವಾದ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ನೀಡಿರುವಂತ ಆದೇಶವಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಪರವಾಗಿ ಮನು ಸಿಂಘ್ವಿ ವಾದಿಸಿದರು.

ಇಂದು ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗುತ್ತಿದೆ.

ಈ ವೇಳೆ ಸಿಎಂ ಸಿದ್ಧರಾಮಯ್ಯ ಪರವಾಗಿ ವಾದ ಆರಂಭಿಸಿದಂತ ಹಿರಿಯ ವಕೀಲ ಮನು ಸಿಂಘ್ವಿ ಅವರು, ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ಆದೇಶವನ್ನು ನೀಡುವಂತಿಲ್ಲ ಎಂಬುದಾಗಿ ಹೇಳಿದರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತ ಮಧ್ಯಪ್ರದೇಶದ ತೀರ್ಪುಗಳನ್ನು ಉಲ್ಲೇಖಿಸಿದರು.

ರಾಜ್ಯಪಾಲರಿಗೆ ಸಲಹೆ ನೀಡುವ ಸಂಬಂಧದ ಕ್ಯಾಬಿನೆಟ್ ಸಭೆಯಲ್ಲೂ ಸಿದ್ಧರಾಮಯ್ಯ ಭಾಗಿಯಾಗಿಲ್ಲ. ರಾಜ್ಯ ಸಚಿವ ಸಂಪುಟ ಸಭೆಯಿಂದ ಹೊರಗೆ ಉಳಿದಿದ್ದಾರೆ. ಇಂತಹ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಸಲಹೆ ಮಾಡಿದ್ದಾರೆ. ಹೀಗಿದ್ದರೂ ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ ಎಂದರು.

ಇನ್ನೂ ರಾಜ್ಯಪಾಲರಿಗೆ ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಮುಡಾ ಹಗರಣ ಸಂಬಂಧ ದೂರು ನೀಡಿದಂತ ಕೆಲವೇ ಕ್ಷಣಗಳಲ್ಲಿ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂಬುದಾಗಿಯೂ ಹೈಕೋರ್ಟ್ ಗಮನಕ್ಕೆ ಸಿಎಂ ಸಿದ್ಧರಾಮಯ್ಯ ಪರ ಹಿರಿಯ ವಕೀಲ ಮನು ಸಿಂಘ್ವಿ ತಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

18 mins ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

23 mins ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

28 mins ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

14 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

14 hours ago