Categories: ರಾಜ್ಯ

ಹಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ, ಕೊರೆಯುವ ಚಳಿ; ನಗರವಾರು ವಿವರ ಇಲ್ಲಿದೆ

ಮೈಸೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಿವಿಧೆಡೆ ಚುಮು ಚುಮು ಚಳಿಯು ಮೈಕೊರೆಯುತ್ತಿದೆ.  ಈ ಮಧ್ಯೆ ಡಿಸೆಂಬರ್‌ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆ ಇರಲಿದೆ. ರಾಜ್ದಯ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಸಹ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟೆಗ್ರೆಡ್‌ ಗಿಂತ ಕೆಳಗೆ ಇದೆ.

ವಿಜಯಪುರ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್‌, ಬೆಳಗಾವಿ, ಧಾರವಾಡ, ರಾಯಚೂರು ಹಾಗೂ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳ್ಲಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್‌ವರೆಗೂ ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

ಮಂಜಿನ ನಗರಿ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ತಾಪಮಾನ ಇರಲಿದೆ.

ಇನ್ನೂ ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ವರದಿಯಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಟ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16 ತಪಾಮಾನ ವರದಿಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಕಾರವಾರ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಬ್ಬನಿಯ ಜೋರಿದೆ. ಇನ್ನೂ ನವೆಂಬರ್‌ 26 ಮತ್ತು 27 ರಂದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಮೈಸೂರು: 90 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಉರಗ ಸಂರಕ್ಷಕ ಕೆಂಪರಾಜು ಯಶಸ್ವಿಯಾಗಿದ್ದಾರೆ. ಮೈಸೂರಿನ ಇಲವಾಲ ಗ್ರಾಮದಲ್ಲಿ…

8 mins ago

ಉಡುತೊರೆ ಹಳ್ಳ ಜಲಾಶಯಕ್ಕೆ ನೀರು ತುಂಬಿಸಲು ಬಜೆಟ್‌ನಲ್ಲಿ ಅನುಮೋದನೆ ಸಿಗುವ ವಿಶ್ವಾಸ: ಮಾಜಿ ಶಾಸಕ ಆರ್.‌ನರೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: 9 ವರ್ಷಗಳ ಕಾಲ ನಡೆಸಿದ ನಿರಂತರ ಹೋರಾಟ, ಕ್ಷೇತ್ರದ ರೈತ…

26 mins ago

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

2 hours ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

2 hours ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

3 hours ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

3 hours ago