ಮೈಸೂರು: ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ವಿವಿಧೆಡೆ ಚುಮು ಚುಮು ಚಳಿಯು ಮೈಕೊರೆಯುತ್ತಿದೆ. ಈ ಮಧ್ಯೆ ಡಿಸೆಂಬರ್ ಮತ್ತು ಜನವರಿ ಅಂತ್ಯದವರೆಗೆ ಚಳಿಯ ಅಬ್ಬರ ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರಿ ವಾಡಿಕೆಗಿಂತ 2 ರಿಂದ 3 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆ ಇರಲಿದೆ. ರಾಜ್ದಯ ಹಲವು ಜಿಲ್ಲೆಗಳಲ್ಲಿ ಇಂದು (ನ.22) ಸಹ ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟೆಗ್ರೆಡ್ ಗಿಂತ ಕೆಳಗೆ ಇದೆ.
ವಿಜಯಪುರ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಬೆಳಗಾವಿ, ಧಾರವಾಡ, ರಾಯಚೂರು ಹಾಗೂ ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳ್ಲಲಿ ಮುಂದಿನ ದಿನಗಳಲ್ಲಿ ಕನಿಷ್ಠ ಉಷ್ಣಾಂಶ 12 ಡಿಗ್ರಿ ಸೆಲ್ಸಿಯಸ್ವರೆಗೂ ಇಳಿಕೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಮಂಜಿನ ನಗರಿ ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ತಾಪಮಾನ ಇರಲಿದೆ.
ಇನ್ನೂ ಮೈಸೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ವರದಿಯಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ 33 ಮತ್ತು ಕನಿಷ್ಟ 24, ಶಿವಮೊಗ್ಗದಲ್ಲಿ ಗರಿಷ್ಠ 31 ಮತ್ತು ಕನಿಷ್ಠ 16, ಬೆಳಗಾವಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 16 ತಪಾಮಾನ ವರದಿಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಕಾರವಾರ ಮತ್ತು ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ 12.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಬ್ಬನಿಯ ಜೋರಿದೆ. ಇನ್ನೂ ನವೆಂಬರ್ 26 ಮತ್ತು 27 ರಂದು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…