ಬೆಂಗಳೂರು : ನನ್ನನ್ನೂ ಸೇರಿದಂತೆ ಅನೇಕ ನಾಯಕರು ಮನುಷ್ಯಾರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ದೇವೇಗೌಡರೇ ಕಾರಣ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನೂ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ನಾಯಕರು ಮನುಷ್ಯರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೂಲ ಕಾರಣ ಎಂದರು.
ತಿಳಿದೊ ತಿಳಿಯದೆಯೋ ಸಿದ್ದರಾಮಯ್ಯ ಅವರು ದೇವೇಗೌಡರ ವಿಚಾರದಲ್ಲಿ ಏನಾದರು ತಪ್ಪು ಮಾಡಲು ಹೊರಟಿದ್ದರೆ ಅದು ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಿವಿ ಮಾತು ಹೇಳಿದರು.
ದೇವೇಗೌಡರ ದೂರದೃಷ್ಠಿ ಇಲ್ಲದಿದ್ದರೆ ನಾವು ಯಾವ ಊರಿನ ದಾಸಯ್ಯರು. ದೇವೇಗೌಡರನ್ನು ಮತ್ತೊಬ್ಬರೊಂದಿಗೆ ಹೋಲಿಕೆ ಮಾಡುವುದೆ ತಪ್ಪು ಅದನ್ನು ನಾವು ಇಷ್ಟಪಡುವುದಿಲ್ಲ ಎಂದರು.
ಕಳಂಕ ರಹಿತ ಸ್ವಚರಿತ್ರೆ ಇರುವಂತ ವ್ಯಕ್ತಿ ಎಂದರೆ ಅದು ದೇವೇಗೌಡ್ರು.
೯೨ ವರ್ಷದಲ್ಲೂ ಇಡೀ ದೇಶದ ಬಗ್ಗೆ ತಮ್ಮದೇ ಆದ ದೂರದೃಷ್ಠಿ ಇರುವಂತ ನಾಯ ಎಂದರೆ ಅದು ನಮ್ಮ ದೇವೇಗೌಡ ಅವರು ಮಾತ್ರ. ಅವರು ನಮ್ಮ ನಾಯಕರು, ನಮ್ಮ ರಾಜ್ಯದವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…