ಬೆಂಗಳೂರು : ನನ್ನನ್ನೂ ಸೇರಿದಂತೆ ಅನೇಕ ನಾಯಕರು ಮನುಷ್ಯಾರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ದೇವೇಗೌಡರೇ ಕಾರಣ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನೂ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ನಾಯಕರು ಮನುಷ್ಯರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೂಲ ಕಾರಣ ಎಂದರು.
ತಿಳಿದೊ ತಿಳಿಯದೆಯೋ ಸಿದ್ದರಾಮಯ್ಯ ಅವರು ದೇವೇಗೌಡರ ವಿಚಾರದಲ್ಲಿ ಏನಾದರು ತಪ್ಪು ಮಾಡಲು ಹೊರಟಿದ್ದರೆ ಅದು ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಿವಿ ಮಾತು ಹೇಳಿದರು.
ದೇವೇಗೌಡರ ದೂರದೃಷ್ಠಿ ಇಲ್ಲದಿದ್ದರೆ ನಾವು ಯಾವ ಊರಿನ ದಾಸಯ್ಯರು. ದೇವೇಗೌಡರನ್ನು ಮತ್ತೊಬ್ಬರೊಂದಿಗೆ ಹೋಲಿಕೆ ಮಾಡುವುದೆ ತಪ್ಪು ಅದನ್ನು ನಾವು ಇಷ್ಟಪಡುವುದಿಲ್ಲ ಎಂದರು.
ಕಳಂಕ ರಹಿತ ಸ್ವಚರಿತ್ರೆ ಇರುವಂತ ವ್ಯಕ್ತಿ ಎಂದರೆ ಅದು ದೇವೇಗೌಡ್ರು.
೯೨ ವರ್ಷದಲ್ಲೂ ಇಡೀ ದೇಶದ ಬಗ್ಗೆ ತಮ್ಮದೇ ಆದ ದೂರದೃಷ್ಠಿ ಇರುವಂತ ನಾಯ ಎಂದರೆ ಅದು ನಮ್ಮ ದೇವೇಗೌಡ ಅವರು ಮಾತ್ರ. ಅವರು ನಮ್ಮ ನಾಯಕರು, ನಮ್ಮ ರಾಜ್ಯದವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…