ಬೆಂಗಳೂರು : ನನ್ನನ್ನೂ ಸೇರಿದಂತೆ ಅನೇಕ ನಾಯಕರು ಮನುಷ್ಯಾರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ದೇವೇಗೌಡರೇ ಕಾರಣ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನೂ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ನಾಯಕರು ಮನುಷ್ಯರಾಗಿದ್ದಾರೆ ಎಂದರೆ ಅದಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮೂಲ ಕಾರಣ ಎಂದರು.
ತಿಳಿದೊ ತಿಳಿಯದೆಯೋ ಸಿದ್ದರಾಮಯ್ಯ ಅವರು ದೇವೇಗೌಡರ ವಿಚಾರದಲ್ಲಿ ಏನಾದರು ತಪ್ಪು ಮಾಡಲು ಹೊರಟಿದ್ದರೆ ಅದು ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಕಿವಿ ಮಾತು ಹೇಳಿದರು.
ದೇವೇಗೌಡರ ದೂರದೃಷ್ಠಿ ಇಲ್ಲದಿದ್ದರೆ ನಾವು ಯಾವ ಊರಿನ ದಾಸಯ್ಯರು. ದೇವೇಗೌಡರನ್ನು ಮತ್ತೊಬ್ಬರೊಂದಿಗೆ ಹೋಲಿಕೆ ಮಾಡುವುದೆ ತಪ್ಪು ಅದನ್ನು ನಾವು ಇಷ್ಟಪಡುವುದಿಲ್ಲ ಎಂದರು.
ಕಳಂಕ ರಹಿತ ಸ್ವಚರಿತ್ರೆ ಇರುವಂತ ವ್ಯಕ್ತಿ ಎಂದರೆ ಅದು ದೇವೇಗೌಡ್ರು.
೯೨ ವರ್ಷದಲ್ಲೂ ಇಡೀ ದೇಶದ ಬಗ್ಗೆ ತಮ್ಮದೇ ಆದ ದೂರದೃಷ್ಠಿ ಇರುವಂತ ನಾಯ ಎಂದರೆ ಅದು ನಮ್ಮ ದೇವೇಗೌಡ ಅವರು ಮಾತ್ರ. ಅವರು ನಮ್ಮ ನಾಯಕರು, ನಮ್ಮ ರಾಜ್ಯದವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…