ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು(ಮೇ.22) ಮುಂಜಾಗರೂಕತೆ ಕ್ರಮಗಳನ್ನು ಪರಿಶೀಲಿಸಲು ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ.
ಬೆಂಗಳೂರಿನ ನಾಯಂಡಹಳ್ಳಿ, ಬಿಟಿಎಂ ಮೆಟ್ರೀ ಸ್ಟೇಷನ್, ಕೋಡಿ ಚಿಕ್ಕನಹಳ್ಳಿ, ಸಿಲ್ಕ್ ಬೋರ್ಡ್, ಹೊಸರು ಮುಖ್ಯ ರಸ್ತೆ ಸೇರಿದಂತೆ ವಿವಿಧೆಡೆ ನಡೆದಿರುವ ರಾಜಕಾಲುವೆ ಕಾಮಗಾರಿ ಹಾಗೂ ಅಲ್ಲಿನ ಸಮಸ್ಯೆಗಳನ್ನು ಸಿಎಂ ಹಾಗೂ ಡಿಸಿಎಂ ಖುದ್ದು ಪರಿಶೀಲಿಸಿದರು.
ಮಳೆ ಹಾನಿ ಪ್ರದೇಶಗಳಿಗೆ ಭೆಟಿ ನೀಡಿದ ಸಿಎಂ, ಮಳೆ ಬಂದಾಗ ಕೆರೆಯಂತಾಗುತ್ತಿದ್ದ ಸಿಲ್ಕ್ ಬೋರ್ಡ್ ಜಂಕ್ಷನ್ ವೀಕ್ಷಿಸಿದರು. ಈ ವೇಳೆ ಸ್ಥಳೀಯರು ಸಮಸ್ಯೆಗಳ ಬಗ್ಗೆ ಸಿಎಂ, ಡಿಸಿಎಂಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಿಎಂ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಸೂಚನೆ: ಮಳೆ ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ರಾಜಕಾಲುವೆ ಅಗತ್ಯವಿದೆ. ಏಳು ಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದೆ. ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದಗಾಗಿ ಸಿಎಂ ಸೂಚಿಸಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೊತ್ತಿಕೊಳ್ಳಲು ಅನುವು ಮಾಡಿಕೊಟ್ಟರು.
ಸುಗಮ ಸಂಚಾರಕ್ಕೆ ಬಿಟಿಎಂನಿಂದ ಬನಶಂಕರಿ ಕಡೆಗೆ ಹೋಗುವಾಗ ರಾಘವೇಂದ್ರ ಸ್ವಾಮಿ ದೇವಾಸ್ಥಾನ ಸರ್ಕಲ್, ಜಯನಗರ ೫ನೇ ಬ್ಲಾಕ್ನಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್ ಪಾಸ್ ನಿರ್ಮಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಕೋಡಿ ಚಿಕ್ಕನಹಳ್ಳಿ ರಾಜಕಾಲುವೆಯಿಂದ ನೀರು ಹರಿದು ಮನೆಗಳಿಗೆ ನುಗ್ಗುತ್ತಿದ್ದು, ಇಲ್ಲಿನ ಪ್ರವಾಹ ನಿಂಯತ್ರಣಕ್ಕೆ ಜಾಕ್ವೆಲ್ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು.
ಒಟ್ಟಾರೆ ಬೆಂಗಳೂರಿಗೆ ಮಳೆಯಿಂದಾಗುವ ಅನಾಹುತ ಹಾಗೂ ಸಂಚಾರ ದಟ್ಟಣೆಯ ಕಿರಿಕಿರಿಯನ್ನು ತಪ್ಪಿಸಲು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…
ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…
ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…
19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…