ರಾಜ್ಯ

ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ: ಸಿಎಂ, ಡಿಸಿಎಂ ಸಿಟಿ ರೌಂಡ್ಯ್

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು(ಮೇ.22) ಮುಂಜಾಗರೂಕತೆ ಕ್ರಮಗಳನ್ನು ಪರಿಶೀಲಿಸಲು  ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ.

ಬೆಂಗಳೂರಿನ ನಾಯಂಡಹಳ್ಳಿ, ಬಿಟಿಎಂ ಮೆಟ್ರೀ ಸ್ಟೇಷನ್‌, ಕೋಡಿ ಚಿಕ್ಕನಹಳ್ಳಿ, ಸಿಲ್ಕ್‌ ಬೋರ್ಡ್‌, ಹೊಸರು ಮುಖ್ಯ ರಸ್ತೆ ಸೇರಿದಂತೆ ವಿವಿಧೆಡೆ ನಡೆದಿರುವ ರಾಜಕಾಲುವೆ ಕಾಮಗಾರಿ ಹಾಗೂ ಅಲ್ಲಿನ ಸಮಸ್ಯೆಗಳನ್ನು ಸಿಎಂ ಹಾಗೂ ಡಿಸಿಎಂ ಖುದ್ದು ಪರಿಶೀಲಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ಭೆಟಿ ನೀಡಿದ ಸಿಎಂ, ಮಳೆ ಬಂದಾಗ ಕೆರೆಯಂತಾಗುತ್ತಿದ್ದ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ವೀಕ್ಷಿಸಿದರು. ಈ ವೇಳೆ ಸ್ಥಳೀಯರು ಸಮಸ್ಯೆಗಳ ಬಗ್ಗೆ ಸಿಎಂ, ಡಿಸಿಎಂಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಿಎಂ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ  ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆ: ಮಳೆ ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ರಾಜಕಾಲುವೆ ಅಗತ್ಯವಿದೆ. ಏಳು ಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದೆ. ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದಗಾಗಿ ಸಿಎಂ ಸೂಚಿಸಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೊತ್ತಿಕೊಳ್ಳಲು ಅನುವು ಮಾಡಿಕೊಟ್ಟರು.
ಸುಗಮ ಸಂಚಾರಕ್ಕೆ ಬಿಟಿಎಂನಿಂದ ಬನಶಂಕರಿ ಕಡೆಗೆ ಹೋಗುವಾಗ ರಾಘವೇಂದ್ರ ಸ್ವಾಮಿ ದೇವಾಸ್ಥಾನ ಸರ್ಕಲ್‌, ಜಯನಗರ ೫ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಕೋಡಿ ಚಿಕ್ಕನಹಳ್ಳಿ ರಾಜಕಾಲುವೆಯಿಂದ ನೀರು ಹರಿದು ಮನೆಗಳಿಗೆ ನುಗ್ಗುತ್ತಿದ್ದು, ಇಲ್ಲಿನ ಪ್ರವಾಹ ನಿಂಯತ್ರಣಕ್ಕೆ ಜಾಕ್‌ವೆಲ್‌ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು.

ಒಟ್ಟಾರೆ ಬೆಂಗಳೂರಿಗೆ ಮಳೆಯಿಂದಾಗುವ ಅನಾಹುತ  ಹಾಗೂ ಸಂಚಾರ ದಟ್ಟಣೆಯ ಕಿರಿಕಿರಿಯನ್ನು ತಪ್ಪಿಸಲು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

34 seconds ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

5 mins ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

25 mins ago

ಇಂದು ದಿ.ಎಲ್.ಜಿ.ಹಾವನೂರು ಹುಟ್ಟುಹಬ್ಬ ; ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಿದ ಹಾವನೂರು

ಹಾವನೂರು ಆಯೋಗದ ವರದಿಯನ್ನು ಅಂದಿನ ಮುಖ್ಯಮಂತ್ರಿ ಅರಸು ಅವರು 'ಹಿಂದುಳಿದ ವರ್ಗಗಳ ಬೈಬಲ್' ಎಂದು ಬಣ್ಣಿಸಿದರೆ, ಸರ್ವೋಚ್ಚ ನ್ಯಾಯಾಲಯವು 'ಹಿಂದುಳಿದ…

37 mins ago

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

3 hours ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

3 hours ago