ರಾಜ್ಯ

ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ: ಸಿಎಂ, ಡಿಸಿಎಂ ಸಿಟಿ ರೌಂಡ್ಯ್

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು(ಮೇ.22) ಮುಂಜಾಗರೂಕತೆ ಕ್ರಮಗಳನ್ನು ಪರಿಶೀಲಿಸಲು  ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ.

ಬೆಂಗಳೂರಿನ ನಾಯಂಡಹಳ್ಳಿ, ಬಿಟಿಎಂ ಮೆಟ್ರೀ ಸ್ಟೇಷನ್‌, ಕೋಡಿ ಚಿಕ್ಕನಹಳ್ಳಿ, ಸಿಲ್ಕ್‌ ಬೋರ್ಡ್‌, ಹೊಸರು ಮುಖ್ಯ ರಸ್ತೆ ಸೇರಿದಂತೆ ವಿವಿಧೆಡೆ ನಡೆದಿರುವ ರಾಜಕಾಲುವೆ ಕಾಮಗಾರಿ ಹಾಗೂ ಅಲ್ಲಿನ ಸಮಸ್ಯೆಗಳನ್ನು ಸಿಎಂ ಹಾಗೂ ಡಿಸಿಎಂ ಖುದ್ದು ಪರಿಶೀಲಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ಭೆಟಿ ನೀಡಿದ ಸಿಎಂ, ಮಳೆ ಬಂದಾಗ ಕೆರೆಯಂತಾಗುತ್ತಿದ್ದ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ವೀಕ್ಷಿಸಿದರು. ಈ ವೇಳೆ ಸ್ಥಳೀಯರು ಸಮಸ್ಯೆಗಳ ಬಗ್ಗೆ ಸಿಎಂ, ಡಿಸಿಎಂಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಿಎಂ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ  ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆ: ಮಳೆ ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ರಾಜಕಾಲುವೆ ಅಗತ್ಯವಿದೆ. ಏಳು ಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದೆ. ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದಗಾಗಿ ಸಿಎಂ ಸೂಚಿಸಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೊತ್ತಿಕೊಳ್ಳಲು ಅನುವು ಮಾಡಿಕೊಟ್ಟರು.
ಸುಗಮ ಸಂಚಾರಕ್ಕೆ ಬಿಟಿಎಂನಿಂದ ಬನಶಂಕರಿ ಕಡೆಗೆ ಹೋಗುವಾಗ ರಾಘವೇಂದ್ರ ಸ್ವಾಮಿ ದೇವಾಸ್ಥಾನ ಸರ್ಕಲ್‌, ಜಯನಗರ ೫ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಕೋಡಿ ಚಿಕ್ಕನಹಳ್ಳಿ ರಾಜಕಾಲುವೆಯಿಂದ ನೀರು ಹರಿದು ಮನೆಗಳಿಗೆ ನುಗ್ಗುತ್ತಿದ್ದು, ಇಲ್ಲಿನ ಪ್ರವಾಹ ನಿಂಯತ್ರಣಕ್ಕೆ ಜಾಕ್‌ವೆಲ್‌ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು.

ಒಟ್ಟಾರೆ ಬೆಂಗಳೂರಿಗೆ ಮಳೆಯಿಂದಾಗುವ ಅನಾಹುತ  ಹಾಗೂ ಸಂಚಾರ ದಟ್ಟಣೆಯ ಕಿರಿಕಿರಿಯನ್ನು ತಪ್ಪಿಸಲು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

2 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

2 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

2 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

12 hours ago