ರಾಜ್ಯ

ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ: ಸಿಎಂ, ಡಿಸಿಎಂ ಸಿಟಿ ರೌಂಡ್ಯ್

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು(ಮೇ.22) ಮುಂಜಾಗರೂಕತೆ ಕ್ರಮಗಳನ್ನು ಪರಿಶೀಲಿಸಲು  ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಿದ್ದಾರೆ.

ಬೆಂಗಳೂರಿನ ನಾಯಂಡಹಳ್ಳಿ, ಬಿಟಿಎಂ ಮೆಟ್ರೀ ಸ್ಟೇಷನ್‌, ಕೋಡಿ ಚಿಕ್ಕನಹಳ್ಳಿ, ಸಿಲ್ಕ್‌ ಬೋರ್ಡ್‌, ಹೊಸರು ಮುಖ್ಯ ರಸ್ತೆ ಸೇರಿದಂತೆ ವಿವಿಧೆಡೆ ನಡೆದಿರುವ ರಾಜಕಾಲುವೆ ಕಾಮಗಾರಿ ಹಾಗೂ ಅಲ್ಲಿನ ಸಮಸ್ಯೆಗಳನ್ನು ಸಿಎಂ ಹಾಗೂ ಡಿಸಿಎಂ ಖುದ್ದು ಪರಿಶೀಲಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ಭೆಟಿ ನೀಡಿದ ಸಿಎಂ, ಮಳೆ ಬಂದಾಗ ಕೆರೆಯಂತಾಗುತ್ತಿದ್ದ ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ವೀಕ್ಷಿಸಿದರು. ಈ ವೇಳೆ ಸ್ಥಳೀಯರು ಸಮಸ್ಯೆಗಳ ಬಗ್ಗೆ ಸಿಎಂ, ಡಿಸಿಎಂಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಿಎಂ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ  ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆ: ಮಳೆ ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ರಾಜಕಾಲುವೆ ಅಗತ್ಯವಿದೆ. ಏಳು ಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದೆ. ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದಗಾಗಿ ಸಿಎಂ ಸೂಚಿಸಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೊತ್ತಿಕೊಳ್ಳಲು ಅನುವು ಮಾಡಿಕೊಟ್ಟರು.
ಸುಗಮ ಸಂಚಾರಕ್ಕೆ ಬಿಟಿಎಂನಿಂದ ಬನಶಂಕರಿ ಕಡೆಗೆ ಹೋಗುವಾಗ ರಾಘವೇಂದ್ರ ಸ್ವಾಮಿ ದೇವಾಸ್ಥಾನ ಸರ್ಕಲ್‌, ಜಯನಗರ ೫ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಕೋಡಿ ಚಿಕ್ಕನಹಳ್ಳಿ ರಾಜಕಾಲುವೆಯಿಂದ ನೀರು ಹರಿದು ಮನೆಗಳಿಗೆ ನುಗ್ಗುತ್ತಿದ್ದು, ಇಲ್ಲಿನ ಪ್ರವಾಹ ನಿಂಯತ್ರಣಕ್ಕೆ ಜಾಕ್‌ವೆಲ್‌ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು.

ಒಟ್ಟಾರೆ ಬೆಂಗಳೂರಿಗೆ ಮಳೆಯಿಂದಾಗುವ ಅನಾಹುತ  ಹಾಗೂ ಸಂಚಾರ ದಟ್ಟಣೆಯ ಕಿರಿಕಿರಿಯನ್ನು ತಪ್ಪಿಸಲು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

57 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

1 hour ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

1 hour ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

1 hour ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

1 hour ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

1 hour ago