ರಾಜ್ಯ

ಮರಕುಂಬಿ ದಲಿತರ ಮೇಲಿನ ದೌಜ್ಯನ್ಯ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

98 ಜನರಿಗೆ ತಲಾ 5000 ದಂಡ ಹಾಕಲಾಗಿದೆ. ಉಳಿದ ಮೂವರು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್‌ನಲ್ಲಿ ತಲಾ ಐದು ವರ್ಷ ಜೈಲು ಹಾಗೂ ಎರಡು ಸಾವಿರ ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯ ನ್ಯಾಯಾಧೀಶ ಸಿ.ಚಂದ್ರಶೇಖರ್‌ ಆದೇಶ ನೀಡಿದ್ದಾರೆ.

2014ರ ಆಗಸ್ಟ್‌ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಸಂಘರ್ಷ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇದೇ ಅಕ್ಟೋಬರ್‌ 21 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರು 101ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ಇಂದಿಗೆ ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.

2014ರ ಆಗಸ್ಟ್‌ 28 ರಂದು ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಮರಕುಂಬಿ ಗ್ರಾಮದ ದಲಿತ ಸಮುದಾಯದವರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್‌ ಪಡೆಯೋ ವಿಚಾರದಲ್ಲಿ ಅದೇ ಗ್ರಾಮದ ಸವರ್ಣೀಯರು ನಡುವೆ ಜಗಳ ನಡೆದಿತ್ತು. ಸಿನಿಮಾ ಮುಗಿದ ಬಳಿಕ ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

2 hours ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

3 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

3 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

3 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

3 hours ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

3 hours ago