ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
98 ಜನರಿಗೆ ತಲಾ 5000 ದಂಡ ಹಾಕಲಾಗಿದೆ. ಉಳಿದ ಮೂವರು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್ನಲ್ಲಿ ತಲಾ ಐದು ವರ್ಷ ಜೈಲು ಹಾಗೂ ಎರಡು ಸಾವಿರ ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ನ್ಯಾಯಾಧೀಶ ಸಿ.ಚಂದ್ರಶೇಖರ್ ಆದೇಶ ನೀಡಿದ್ದಾರೆ.
2014ರ ಆಗಸ್ಟ್ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಸಂಘರ್ಷ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇದೇ ಅಕ್ಟೋಬರ್ 21 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರು 101ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ಇಂದಿಗೆ ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.
2014ರ ಆಗಸ್ಟ್ 28 ರಂದು ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಮರಕುಂಬಿ ಗ್ರಾಮದ ದಲಿತ ಸಮುದಾಯದವರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಅದೇ ಗ್ರಾಮದ ಸವರ್ಣೀಯರು ನಡುವೆ ಜಗಳ ನಡೆದಿತ್ತು. ಸಿನಿಮಾ ಮುಗಿದ ಬಳಿಕ ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.
ಪ್ರಶಾಂತ್ ಮಲ್ಲಿಕ್ ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…
ನವೀನ್ ಡಿಸೋಜ ಹೋಟೆಲ್ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…
ಖಾಸಗಿ ಬೋರ್ವೆಲ್ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…
೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್ನ ೨ನೇ ಮುಖ್ಯರಸ್ತೆಯಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…