ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
98 ಜನರಿಗೆ ತಲಾ 5000 ದಂಡ ಹಾಕಲಾಗಿದೆ. ಉಳಿದ ಮೂವರು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್ನಲ್ಲಿ ತಲಾ ಐದು ವರ್ಷ ಜೈಲು ಹಾಗೂ ಎರಡು ಸಾವಿರ ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ನ್ಯಾಯಾಧೀಶ ಸಿ.ಚಂದ್ರಶೇಖರ್ ಆದೇಶ ನೀಡಿದ್ದಾರೆ.
2014ರ ಆಗಸ್ಟ್ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಸಂಘರ್ಷ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇದೇ ಅಕ್ಟೋಬರ್ 21 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರು 101ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ಇಂದಿಗೆ ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.
2014ರ ಆಗಸ್ಟ್ 28 ರಂದು ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಮರಕುಂಬಿ ಗ್ರಾಮದ ದಲಿತ ಸಮುದಾಯದವರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್ ಪಡೆಯೋ ವಿಚಾರದಲ್ಲಿ ಅದೇ ಗ್ರಾಮದ ಸವರ್ಣೀಯರು ನಡುವೆ ಜಗಳ ನಡೆದಿತ್ತು. ಸಿನಿಮಾ ಮುಗಿದ ಬಳಿಕ ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…