ರಾಜ್ಯ

ಮರಕುಂಬಿ ದಲಿತರ ಮೇಲಿನ ದೌಜ್ಯನ್ಯ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

98 ಜನರಿಗೆ ತಲಾ 5000 ದಂಡ ಹಾಕಲಾಗಿದೆ. ಉಳಿದ ಮೂವರು ಎಸ್ಸಿ ಎಸ್ಟಿ ಸಮುದಾಯಕ್ಕೆ ಸೇರಿದ್ದರಿಂದ ಅವರಿಗೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗಿಲ್ಲ. ಹೀಗಾಗಿ ಅವರಿಗೆ ಕೊಲೆ ಯತ್ನ, ದೊಂಬಿ ಸೇರಿದಂತೆ ಇನ್ನಿತರ ಸೆಕ್ಷನ್‌ನಲ್ಲಿ ತಲಾ ಐದು ವರ್ಷ ಜೈಲು ಹಾಗೂ ಎರಡು ಸಾವಿರ ದಂಡ ವಿಧಿಸಿ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್‌ ನ್ಯಾಯಾಲಯ ನ್ಯಾಯಾಧೀಶ ಸಿ.ಚಂದ್ರಶೇಖರ್‌ ಆದೇಶ ನೀಡಿದ್ದಾರೆ.

2014ರ ಆಗಸ್ಟ್‌ 28 ರಂದು ಸವರ್ಣೀಯರು ಮತ್ತು ದಲಿತ ಸಮುದಾಯದವರ ನಡುವೆ ಸಂಘರ್ಷ ನಡೆದಿತ್ತು. ಈ ಸಂಬಂಧ ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿತ್ತು. ಇದೇ ಅಕ್ಟೋಬರ್‌ 21 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಧೀಶರು 101ಆರೋಪಿಗಳನ್ನು ಅಪರಾಧಿಗಳು ಎಂದು ತೀರ್ಪು ನೀಡಿ ಇಂದಿಗೆ ಶಿಕ್ಷೆ ಪ್ರಮಾಣ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.

2014ರ ಆಗಸ್ಟ್‌ 28 ರಂದು ಗಂಗಾವತಿಯ ಶಿವ ಚಿತ್ರಮಂದಿರದಲ್ಲಿ ಮರಕುಂಬಿ ಗ್ರಾಮದ ದಲಿತ ಸಮುದಾಯದವರು ಸಿನಿಮಾ ನೋಡಲು ಹೋಗಿದ್ದರು. ಈ ಸಮಯದಲ್ಲಿ ಟಿಕೆಟ್‌ ಪಡೆಯೋ ವಿಚಾರದಲ್ಲಿ ಅದೇ ಗ್ರಾಮದ ಸವರ್ಣೀಯರು ನಡುವೆ ಜಗಳ ನಡೆದಿತ್ತು. ಸಿನಿಮಾ ಮುಗಿದ ಬಳಿಕ ಸಂಜೆ ಗ್ರಾಮದ ಸವರ್ಣೀಯರು ಇದೇ ವಿಚಾರದ ನೆಪದ ಮೇಲೆ ದಲಿತರ ಮನೆಗಳಿಗೆ ನುಗ್ಗಿ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

38 mins ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

40 mins ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

42 mins ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

4 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

4 hours ago