ಹುಬ್ಬಳ್ಳಿ: ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಜೊತೆಗೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿರುವ ಸಭಾಪತಿ ಬಸವರಾಜ ಹೊರಟ್ಟಿ ನಿವಾಸಕ್ಕೆ ತೆರಳಿ ಮರಿತಿಬ್ಬೇಗೌಡ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕಾರ ಮಾಡಿದ್ದಾರೆ.
ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಎಚ್.ಡಿ ದೇವೆಗೌಡ, ಎಚ್ಡಿಕೆ ನಮಗೆ ಸರಿಯಾಗಿ ಸ್ಪಂದಿಸಲಿಲ್ಲ. ನಿಷ್ಠಾವಂತರನ್ನು ಕಡೆಗಣನೆ ಮಾಡಿದ್ದಾರೆ. ನಾವು ಈ ವಿಷಯ ಅವರಿಗೆ ಹೇಳಿದರೆ, ಅದು ನಮ್ಮ ವರಿಷ್ಠರಿಗೆ ಹಿಡಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮತ್ತು ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…