ಬೆಂಗಳೂರು : ಜಮ್ಮು ಕಾಶ್ಮೀರದ ರಚೌರಿಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿ ಕಾಳಗದಲ್ಲಿ ಮಡಿದ ಹುತಾತ್ಮ ಕನ್ನಡಿಗ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರ ಪಾಳ್ಯದಲ್ಲಿ ಬೆಳಿಗ್ಗೆ ೮ ರಿಂದಲೇ ಪಾರ್ಥೀವ ಶರೀರವನ್ನು ಸಾರ್ವಜಿನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ತೆರೆದ ವಾಹನದಲ್ಲಿ ಸರ್ಕಾರಿ ಗೌರವದೊಂದಿಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ಮೆರವಣಿಗೆಯು ಜಿಗಣಿಯ ಓಟಿಸಿ ಸರ್ಕಲ್, ಕೋನಪ್ಪನ ಅಗ್ರಹಾರ ವೃತ್ತ ಕೂಡ್ಲು ಗೇಟ್ ಮಾರ್ಗವಾಗಿ ಸೋಮಸುಂದರ ಪಾಳ್ಯ ಚಿತಾಗಾರಕ್ಕೆ ತರಲಾಯಿತು.
ಪೊಲೀಸ್ ಮತ್ತು ಮಿಲಿಟರಿ ಪಡೆಗಳು ಹುತಾತ್ಮ ಯೋಧನಿಗೆ ಗೌರವ ವಂದನೆ ಸಲ್ಲಿಸಿದರು. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಸೋಮಸುಂದರಪಾಳ್ಯದ ಚಿತಾಗಾರದಲ್ಲಿ ಪ್ರಾಂಜಲ್ ಅವರ ಅಂತ್ಯಕ್ರಿಯೆ ನೆರವೇರಿತು.
https://x.com/Bnglrweatherman/status/1728349088771723412?s=20
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…