ಬೆಂಗಳೂರು : ಜಮ್ಮು ಕಾಶ್ಮೀರದ ರಚೌರಿಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿ ಕಾಳಗದಲ್ಲಿ ಮಡಿದ ಹುತಾತ್ಮ ಕನ್ನಡಿಗ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರ ಪಾಳ್ಯದಲ್ಲಿ ಬೆಳಿಗ್ಗೆ ೮ ರಿಂದಲೇ ಪಾರ್ಥೀವ ಶರೀರವನ್ನು ಸಾರ್ವಜಿನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ತೆರೆದ ವಾಹನದಲ್ಲಿ ಸರ್ಕಾರಿ ಗೌರವದೊಂದಿಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ಮೆರವಣಿಗೆಯು ಜಿಗಣಿಯ ಓಟಿಸಿ ಸರ್ಕಲ್, ಕೋನಪ್ಪನ ಅಗ್ರಹಾರ ವೃತ್ತ ಕೂಡ್ಲು ಗೇಟ್ ಮಾರ್ಗವಾಗಿ ಸೋಮಸುಂದರ ಪಾಳ್ಯ ಚಿತಾಗಾರಕ್ಕೆ ತರಲಾಯಿತು.
ಪೊಲೀಸ್ ಮತ್ತು ಮಿಲಿಟರಿ ಪಡೆಗಳು ಹುತಾತ್ಮ ಯೋಧನಿಗೆ ಗೌರವ ವಂದನೆ ಸಲ್ಲಿಸಿದರು. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಸೋಮಸುಂದರಪಾಳ್ಯದ ಚಿತಾಗಾರದಲ್ಲಿ ಪ್ರಾಂಜಲ್ ಅವರ ಅಂತ್ಯಕ್ರಿಯೆ ನೆರವೇರಿತು.
https://x.com/Bnglrweatherman/status/1728349088771723412?s=20
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…