ಬೆಂಗಳೂರು : ಜಮ್ಮು ಕಾಶ್ಮೀರದ ರಚೌರಿಯಲ್ಲಿ ನಡೆದ ಉಗ್ರರೊಂದಿಗಿನ ಗುಂಡಿ ಕಾಳಗದಲ್ಲಿ ಮಡಿದ ಹುತಾತ್ಮ ಕನ್ನಡಿಗ ಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಅಂತ್ಯಕ್ರಿಯೆ ನೆರವೇರಿತು.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸೋಮಸುಂದರ ಪಾಳ್ಯದಲ್ಲಿ ಬೆಳಿಗ್ಗೆ ೮ ರಿಂದಲೇ ಪಾರ್ಥೀವ ಶರೀರವನ್ನು ಸಾರ್ವಜಿನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ತೆರೆದ ವಾಹನದಲ್ಲಿ ಸರ್ಕಾರಿ ಗೌರವದೊಂದಿಗೆ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಈ ಮೆರವಣಿಗೆಯು ಜಿಗಣಿಯ ಓಟಿಸಿ ಸರ್ಕಲ್, ಕೋನಪ್ಪನ ಅಗ್ರಹಾರ ವೃತ್ತ ಕೂಡ್ಲು ಗೇಟ್ ಮಾರ್ಗವಾಗಿ ಸೋಮಸುಂದರ ಪಾಳ್ಯ ಚಿತಾಗಾರಕ್ಕೆ ತರಲಾಯಿತು.
ಪೊಲೀಸ್ ಮತ್ತು ಮಿಲಿಟರಿ ಪಡೆಗಳು ಹುತಾತ್ಮ ಯೋಧನಿಗೆ ಗೌರವ ವಂದನೆ ಸಲ್ಲಿಸಿದರು. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ ಬಳಿಕ ಸೋಮಸುಂದರಪಾಳ್ಯದ ಚಿತಾಗಾರದಲ್ಲಿ ಪ್ರಾಂಜಲ್ ಅವರ ಅಂತ್ಯಕ್ರಿಯೆ ನೆರವೇರಿತು.
https://x.com/Bnglrweatherman/status/1728349088771723412?s=20
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…